ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡಿನ ರಾಯಚೂರು, ಬೀದರ್, ಕೊಪ್ಪಳ, ಕಲಬುರಗಿ ಹಾಗೂ ದಕ್ಷಿಣ ಒಳನಾಡಿನ ಕೊಡಗು ಜಿಲ್ಲೆಯಲ್ಲಿ ಸೆ.11ರ ವರೆಗೂ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲೂ ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ. ಬೆಂಗಳೂರು ಗ್ರಾಮಾಂತರ, ಕೋಲಾರ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಚಾಮರಾಜನಗರದಲ್ಲಿ ಸಾಧಾರಣ ಮಳೆ ಆಗಲಿದೆ ಎಂದು ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಕನಿಷ್ಠ 17 ಡಿಗ್ರಿ, ಗರಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ. ರಾಯಚೂರು ಜಿಲ್ಲೆಯಲ್ಲಿ ಗರಿಷ್ಠ 31 ಡಿಗ್ರಿ ಹಾಗೂ ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 28-20
ಮಂಗಳೂರು: 29-25
ಶಿವಮೊಗ್ಗ: 28-22
ಬೆಳಗಾವಿ: 26-21
ಮೈಸೂರು: 29-21
ಮಂಡ್ಯ: 30-22
ಮಡಿಕೇರಿ: 21-17
ರಾಮನಗರ: 30-22
ಹಾಸನ: 27-20
ಚಾಮರಾಜನಗರ: 29-22
ಚಿಕ್ಕಬಳ್ಳಾಪುರ: 28-19
ಕೋಲಾರ: 29-21
ತುಮಕೂರು: 29-21
ಉಡುಪಿ: 28-25
ಕಾರವಾರ: 29-26
ಚಿಕ್ಕಮಗಳೂರು: 25-19
ದಾವಣಗೆರೆ: 29-22
ಹುಬ್ಬಳ್ಳಿ: 28-22
ಚಿತ್ರದುರ್ಗ: 29-22
ಹಾವೇರಿ: 28-22
ಬಳ್ಳಾರಿ: 32-24
ಗದಗ: 29-22
ಕೊಪ್ಪಳ: 31-23
ರಾಯಚೂರು: 31-24
ಯಾದಗಿರಿ: 30-24
ವಿಜಯಪುರ: 29-23
ಬೀದರ್: 26-22
ಕಲಬುರಗಿ: 28-23
ಬಾಗಲಕೋಟೆ: 31-23
Web Stories