ರಾಜ್ಯದ ಹವಾಮಾನ ವರದಿ: 10-08-2024

Public TV
1 Min Read
WEATHER 1 e1679398614299

ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಆಗಸ್ಟ್ 12ರ ವರೆಗೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಅಲ್ಲದೇ ಉತ್ತರ ಮತ್ತು ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲೂ ಚದುರಿದಂತೆ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸದ್ಯಕ್ಕಂತೂ ಮಳೆ ನಿಲ್ಲುವ ಲಕ್ಷಣ ಕಾಣುತ್ತಿಲ್ಲ, ಹೀಗಿರುವಾಗ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಲ್ಲಿಯೂ ಉತ್ತಮ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಹಾಗಾಗಿ ಕಳೆದ ಜುಲೈ ತಿಂಗಳಲ್ಲಿ ಆರ್ದ್ರತೆ ಮತ್ತು ಶಾಖ ಎದುರಿಸುತ್ತಿದ್ದ ಜನರು ಮುಂದಿನ ದಿನಗಳಲ್ಲಿ ಭಾರೀ ಮಳೆ ಎದುರಿಸುವ ಸಾಧ್ಯತೆ ಇದೆ. ಜೊತೆಗೆ ಆಗಸ್ಟ್ ಮತ್ತು ಸೆಪ್ಟೆಂಬರ್‌ನಲ್ಲಿ ದೇಶದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಒಂದು ವೇಳೆ ನಿರೀಕ್ಷೆಗೂ ಮೀರಿ ಮಳೆ ಬಂದರೆ ಅವಾಂತರಗಳೂ ಸಂಭವಿಸುವ ಸಾಧ್ಯತೆಗಳಿವೆ.

Weather

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ನಗರಗಳ ಹವಾಮಾನ ವರದಿ:
ಬೆಂಗಳೂರು: 28-21
ಮಂಗಳೂರು: 28-24
ಶಿವಮೊಗ್ಗ: 28-21
ಬೆಳಗಾವಿ: 27-21
ಮೈಸೂರು: 29-21

Weather

ಮಂಡ್ಯ: 30-22
ಮಡಿಕೇರಿ: 23-17
ರಾಮನಗರ: 30-22
ಹಾಸನ: 27-19
ಚಾಮರಾಜನಗರ: 29-22
ಚಿಕ್ಕಬಳ್ಳಾಪುರ: 28-21

Weather 1

ಕೋಲಾರ: 29-22
ತುಮಕೂರು: 28-21
ಉಡುಪಿ: 28-24
ಕಾರವಾರ: 28-25
ಚಿಕ್ಕಮಗಳೂರು: 25-19
ದಾವಣಗೆರೆ: 29-22

weather

ಹುಬ್ಬಳ್ಳಿ: 28-21
ಚಿತ್ರದುರ್ಗ: 29-21
ಹಾವೇರಿ: 29-21
ಬಳ್ಳಾರಿ: 32-23
ಗದಗ: 29-21
ಕೊಪ್ಪಳ: 31-22

weather

ರಾಯಚೂರು: 32-24
ಯಾದಗಿರಿ: 32-24
ವಿಜಯಪುರ: 30-22
ಬೀದರ್: 30-23
ಕಲಬುರಗಿ: 32-23
ಬಾಗಲಕೋಟೆ: 31-22

Share This Article