ರಾಜ್ಯದ ಹವಾಮಾನ ವರದಿ: 13-06-2023

Public TV
1 Min Read
WEATHER 1 e1679398614299

ಅರಬ್ಬೀ ಸಮುದ್ರದಲ್ಲಿ ಬಿಪೊರ್‌ಜೊಯ್ ಚಂಡಮಾರುತದ ಅಬ್ಬರ ಜೋರಾಗಿದೆ. ರಾಜಧಾನಿ ಬೆಂಗಳೂರು ಸೇರಿ ರಾಜ್ಯದಲ್ಲಿ ಇಂದಿನಿಂದ 4 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು, ಕರಾವಳಿಯ ಬಹುತೇಕ ಜಿಲ್ಲೆಗಳಲ್ಲಿ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

WEATHER 3

ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು ಉಡುಪಿ, ಹಾಸನ, ಶಿವಮೊಗ್ಗ ಹಾಗೂ ಕೊಡಗು ಸೇರಿದಂತೆ ಬಹುತೇಕ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನ ಕೆಲವು ಭಾಗದಲ್ಲಿ ಮಳೆಯಾಗಲಿದೆ. ರಾಜ್ಯದ ಕೆಲವೆಡೆ ಗುಡುಗು, ಮಿಂಚು ಬಿರುಗಾಳಿಯೊಂದಿಗೆ ಮಳೆ ಸುರಿಯಲಿದೆ. ಗಾಳಿಯ ವೇಗವು ಗಂಟೆಗೆ 40 ರಿಂದ 50 ಕಿಲೋ ಮೀಟರ್ ವೇಗದಲ್ಲಿ ಸಾಗುವ ಸಾಧ್ಯತೆ ಇದೆ. ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40 ರಿಂದ 50 ಕಿಲೋ ಮೀಟರ್ ವೇಗದಲ್ಲಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಮೀನುಗಾರರು ಅರಬ್ಬಿ ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

WEATHER 2

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಕೊಡಗು ಜಿಲ್ಲೆಯಲ್ಲಿ ಗರಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ನಗರಗಳ ಹವಾಮಾನ ವರದಿ:
ಬೆಂಗಳೂರು: 32-21
ಮಂಗಳೂರು: 32-26
ಶಿವಮೊಗ್ಗ: 33-23
ಬೆಳಗಾವಿ: 31-22
ಮೈಸೂರು: 31-22

weather

ಮಂಡ್ಯ: 33-22
ಮಡಿಕೇರಿ: 25-18
ರಾಮನಗರ: 33-22
ಹಾಸನ: 29-21
ಚಾಮರಾಜನಗರ: 32-22
ಚಿಕ್ಕಬಳ್ಳಾಪುರ: 32-21

weather

ಕೋಲಾರ: 33-22
ತುಮಕೂರು: 33-21
ಉಡುಪಿ: 32-26
ಕಾರವಾರ: 31-27
ಚಿಕ್ಕಮಗಳೂರು: 28-19
ದಾವಣಗೆರೆ: 35-24

weather

ಹುಬ್ಬಳ್ಳಿ: 33-23
ಚಿತ್ರದುರ್ಗ: 34-22
ಹಾವೇರಿ: 34-24
ಬಳ್ಳಾರಿ: 38-25
ಗದಗ: 35-23
ಕೊಪ್ಪಳ: 36-24

WEATHER

ರಾಯಚೂರು: 39-26
ಯಾದಗಿರಿ: 39-27
ವಿಜಯಪುರ: 37-24
ಬೀದರ್: 37-25
ಕಲಬುರಗಿ: 39-26
ಬಾಗಲಕೋಟೆ: 37-24

Share This Article