ಬೆಂಗಳೂರಿನಲ್ಲಿ ಭಾರೀ ಮಳೆಯಾಗುತ್ತಿರುವ (Heavy Rain) ಕಾರಣ ಇಂದು ಸಹ ಯೆಲ್ಲೋ ಅಲರ್ಟ್ (Yello Alert) ಇರಲಿದೆ. ಇನ್ನುಳಿದ ಜಿಲ್ಲೆಗಳಲ್ಲಿಯೂ ಮುಂದಿನ ಮರ್ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗಲಿದೆ.
ಉತ್ತರ ಒಳನಾಡಿನ ಬೆಳಗಾವಿ (Belagavi), ಬೀದರ್ (Bidar), ಧಾರವಾಡ (Dharwad), ಗದಗ, ಹಾವೇರಿ, ಕಲ್ಬುರ್ಗಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮಂಗಳೂರು, ರಾಮನಗರ, ಉಡುಪಿ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಅಲ್ಲಲ್ಲಿ ಚದುರಿದಂತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡಿನ ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ದಾವಣಗೆರೆ, ಕೊಡಗು, ಮಂಡ್ಯ, ಶಿವಮೊಗ್ಗ, ಕೋಲಾರ, ತುಮಕೂರು ಜಿಲ್ಲೆಗಳಲ್ಲಿ ಎಂದಿನಂತೆ ಮಳೆಯ ವಾತಾವರಣ ಇರಲಿದೆ.
ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ಕಾರವಾರದಲ್ಲಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್ ಇರಲಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 27-19
ಮಂಗಳೂರು: 29-24
ಶಿವಮೊಗ್ಗ: 28-21
ಬೆಳಗಾವಿ: 27-20
ಮೈಸೂರು: 29-20
ಮಂಡ್ಯ: 29-20
ಮಡಿಕೇರಿ: 24-17
ರಾಮನಗರ: 28-18
ಹಾಸನ: 27-19
ಚಾಮರಾಜನಗರ: 28-21
ಚಿಕ್ಕಬಳ್ಳಾಪುರ: 26-18
ಕೋಲಾರ: 28-20
ತುಮಕೂರು: 28-20
ಉಡುಪಿ: 29-24
ಕಾರವಾರ: 29-25
ಚಿಕ್ಕಮಗಳೂರು: 26-18
ದಾವಣಗೆರೆ: 29-21
ಚಿತ್ರದುರ್ಗ: 27-21
ಹಾವೇರಿ: 29-22
ಬಳ್ಳಾರಿ: 29-22
ಗದಗ: 28-21
ಕೊಪ್ಪಳ: 29-22
ರಾಯಚೂರು: 29-23
ಯಾದಗಿರಿ: 29-22
ವಿಜಯಪುರ: 28-22
ಬೀದರ್: 27-21
ಕಲಬುರಗಿ: 29-22
ಬಾಗಲಕೋಟೆ: 29-22