ಮುಂಗಾರು ಆರ್ಭಟ ಜೋರಾಗಿದ್ದು, ಹಲವು ಜಿಲ್ಲೆಗಳ ಜನಜೀನ ಅಸ್ತವ್ಯಸ್ತವಾಗಿದೆ. ಇನ್ನೂ 3 ದಿನಗಳ ಕಾಲ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಿಗೆ ರೆಡ್ ಅಲರ್ಟ್ ಇದ್ದು, ಮಳೆಯ ಆರ್ಭಟ ಮುಂದುವರಿಯಲಿದೆ.
ಶನಿವಾರ: ಜೂನ್ 14ರ ಶನಿವಾರದಂದು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು ಈ 5 ಜಿಲ್ಲೆಗಳಿಗೆ ರೆಡ್ ಅಲರ್ಟ್, ಶಿವಮೊಗ್ಗ, ಹಾಸನ, ಹಾವೇರಿ, ಧಾರವಾಡ, ಗದಗ, ಬೆಳಗಾವಿ, ವಿಜಯಪುರ, ಕಲಬುರಗಿ, ಬೀದರ್ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ ಇತರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಕೊಡಲಾಗಿದೆ.
ಭಾನುವಾರ: ಇನ್ನು ಭಾನುವಾರ ಕೂಡ ರಾಜ್ಯಾದ್ಯಂತ ವ್ಯಾಪಕ ಮಳೆಯಾಗಲಿದ್ದು, ಕರಾವಳಿ, ಕೊಡಗು, ಚಿಕ್ಕಮಗಳೂರಿಗೆ ರೆಡ್ ಅಲರ್ಟ್, ಹಾಸನ, ಹಾವೇರಿ, ಧಾರವಾಡ, ಬೆಳಗಾವಿ, ಬೀದರ್ ಗೆ ಆರೆಂಜ್ ಅಲರ್ಟ್ ಕೊಡಲಾಗಿದೆ. ಉಳಿದೆಡೆ ಯೆಲ್ಲೋ ಅಲರ್ಟ್ ಕೊಡಲಾಗಿದೆ. ಮುಂದಿನ ವಾರ ಸಹ ಕರಾವಳಿ ಹಾಗೂ ಮಲೆನಾಡು ಭಾಗದ 7 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಇರಲಿದೆ. ಮೈಸೂರು, ದಾವಣಗೆರೆ, ಹಾವೇರಿ, ಗದಗ, ಕೊಪ್ಪಳ, ಧಾರವಾಡ, ಬಾಗಲಕೋಟೆ, ಬೆಳಗಾವಿ, ಬೀದರ್ ಜಿಲ್ಲೆಗಳು ಆರೆಂಜ್ ಅಲರ್ಟ್ನಲ್ಲಿ ಮುಂದುವರಿಯಲಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಜಿಲ್ಲೆಯಲ್ಲಿ ಗರಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 26-21
ಮಂಗಳೂರು: 27-24
ಶಿವಮೊಗ್ಗ: 26-22
ಬೆಳಗಾವಿ: 26-22
ಮೈಸೂರು: 27-22
ಮಂಡ್ಯ: 27-22
ಮಡಿಕೇರಿ: 23-19
ರಾಮನಗರ: 27-22
ಹಾಸನ: 23-20
ಚಾಮರಾಜನಗರ: 28-22
ಚಿಕ್ಕಬಳ್ಳಾಪುರ: 27-21
ಕೋಲಾರ: 28-22
ತುಮಕೂರು: 27-22
ಉಡುಪಿ: 27-22
ಕಾರವಾರ: 28-26
ಚಿಕ್ಕಮಗಳೂರು: 23-19
ದಾವಣಗೆರೆ: 27-22
ಹುಬ್ಬಳ್ಳಿ: 27-22
ಚಿತ್ರದುರ್ಗ: 27-22
ಹಾವೇರಿ: 27-23
ಬಳ್ಳಾರಿ: 29-25
ಗದಗ: 28-22
ಕೊಪ್ಪಳ: 29-23
ರಾಯಚೂರು: 32-26
ಯಾದಗಿರಿ: 32-25
ವಿಜಯಪುರ: 29-23
ಬೀದರ್: 29-24
ಕಲಬುರಗಿ: 31-24
ಬಾಗಲಕೋಟೆ: 27-24