ರಾಜ್ಯದಲ್ಲಿ ಮಳೆ ಕಾಣದೇ ಬಿಸಿಲ ಬೇಗೆಗೆ ಕಂಗೆಟ್ಟಿದ್ದ ಕರುನಾಡಿಗೆ ವರುಣನ ಆಗಮನವಾಗಿದೆ. ಕಳೆದ ಎರಡು ದಿನಗಳು ಬೀದರ್, ಮಡಿಕೇರಿ ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಿದೆ. ಇಂದೂ (ಏ.15) ಸಹ ಕೆಲ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಿಗೆ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ಸೇರಿದಂತೆ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಬಹುದೆಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಏ.15ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೀದರ್, ಕಲಬುರಗಿ, ವಿಜಯಪುರ, ಚಿತ್ರದುರ್ಗಾ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಗಳಿವೆ ಎಂಬುದಾಗಿ ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಬಳ್ಳಾರಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 36-21
ಮಂಗಳೂರು: 33-27
ಶಿವಮೊಗ್ಗ: 39-22
ಬೆಳಗಾವಿ: 38-23
ಮೈಸೂರು: 38-22
ಮಂಡ್ಯ: 38-22
ಮಡಿಕೇರಿ: 33-18
ರಾಮನಗರ: 38-22
ಹಾಸನ: 36-20
ಚಾಮರಾಜನಗರ: 37-22
ಚಿಕ್ಕಬಳ್ಳಾಪುರ: 36-21
ಕೋಲಾರ: 35-20
ತುಮಕೂರು: 37-22
ಉಡುಪಿ: 34-27
ಕಾರವಾರ: 34-27
ಚಿಕ್ಕಮಗಳೂರು: 36-20
ದಾವಣಗೆರೆ: 39-23
ಹುಬ್ಬಳ್ಳಿ: 39-23
ಚಿತ್ರದುರ್ಗ: 38-23
ಹಾವೇರಿ: 39-23
ಬಳ್ಳಾರಿ: 40-27
ಗದಗ: 39-24
ಕೊಪ್ಪಳ: 39-25
ರಾಯಚೂರು: 40-27
ಯಾದಗಿರಿ: 40-27
ವಿಜಯಪುರ: 38-27
ಬೀದರ್: 37-26
ಕಲಬುರಗಿ: 39-27
ಬಾಗಲಕೋಟೆ: 39-27