ರಾಜ್ಯ ರಾಜಧಾನಿ ಬೆಂಗಳೂರು (Bengaluru) ಸೇರಿದಂತೆ ರಾಜ್ಯದ ವಿವಿಧೆಡೆ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಮಳೆಯ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಂಗಳೂರು, ಬೆಳಗಾವಿ, ಶಿವಮೊಗ್ಗ, ಹುಬ್ಬಳ್ಳಿ, ಚಿತ್ರದುರ್ಗ, ಹಾವೇರಿ, ಬಳ್ಳಾರಿ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ, ವಿಜಯಪುರ, ಬೀದರ್, ಕಲಬುರಗಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಇನ್ನುಳಿದಂತೆ ಚಿಕ್ಕಮಗಳೂರು, ಶಿವಮೊಗ್ಗ, ಕೋಲಾರ, ಮೈಸೂರು, ಮಂಡ್ಯ, ತುಮಕೂರು, ಚಾಮರಾಜನಗರ ಸೇರಿ ಹಲವು ಜಿಲ್ಲೆಗಳಲ್ಲಿ ಬಿಸಿಲು ಮಳೆ ಆಟ ಮುಂದುವರಿಯಲಿದೆ. ಬೆಳಗ್ಗೆ ಮತ್ತು ಸಂಜೆ ಮಳೆಯಾಗಲಿದ್ದು, ಮಧ್ಯಾಹ್ನ ಬಿಸಿಲು ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಇನ್ನೂ ಕಲಬುರಗಿ ಜಿಲ್ಲೆಯಲ್ಲಿ ಗರಿಷ್ಠ ತಾಪಮಾನ 37 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 31-23
ಮಂಗಳೂರು: 31-24
ಶಿವಮೊಗ್ಗ: 31-22
ಬೆಳಗಾವಿ: 30-23
ಮೈಸೂರು: 33-23
ಮಂಡ್ಯ: 33-23
ಮಡಿಕೇರಿ: 28-20
ರಾಮನಗರ: 32-23
ಹಾಸನ: 28-21
ಚಾಮರಾಜನಗರ: 33-22
ಚಿಕ್ಕಬಳ್ಳಾಪುರ: 31-22
ಕೋಲಾರ: 32-22
ತುಮಕೂರು: 31-22
ಉಡುಪಿ: 31-26
ಕಾರವಾರ: 34-28
ಚಿಕ್ಕಮಗಳೂರು: 27-19
ದಾವಣಗೆರೆ: 32-24
ಹುಬ್ಬಳ್ಳಿ: 33-24
ಚಿತ್ರದುರ್ಗ: 30-23
ಹಾವೇರಿ: 34-24
ಬಳ್ಳಾರಿ: 36-24
ಗದಗ: 31-24
ಕೊಪ್ಪಳ: 34-24
ರಾಯಚೂರು: 37-25
ಯಾದಗಿರಿ: 36-26
ವಿಜಯಪುರ: 34-25
ಬೀದರ್: 34-26
ಕಲಬುರಗಿ: 37-27
ಬಾಗಲಕೋಟೆ: 33-24