ಇನ್ನೂ ಕೆಲವೇ ದಿನಗಳಲ್ಲಿ ರಾಜ್ಯಕ್ಕೆ ಮುಂಗಾರು ಪ್ರವೇಶಿಸಲಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಮುಂದಿನ ದಿನಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಬೆಂಗಳೂರು, ಮಂಗಳೂರು, ಶಿವಮೊಗ್ಗ, ಮೈಸೂರು, ಮಂಡ್ಯ ಸೇರಿದಂತೆ ದಕ್ಷಿಣ ಒಳನಾಡು ಭಾಗದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ. ರಾಯಚೂರು, ಯಾದಗಿರಿ, ವಿಜಯಪುರ, ಬೀದರ್, ಕಲಬುರಗಿ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮೋಡ ಕವಿದ ವಾತಾವರಣ ಇರಲಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಯಾದಗಿರಿ ಜಿಲ್ಲೆಯಲ್ಲಿ ಗರಿಷ್ಠ 39 ಡಿಗ್ರಿ, ಕನಿಷ್ಠ 28 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಕೊಡಗು ಜಿಲ್ಲೆಯಲ್ಲಿ ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್, ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 29-21
ಮಂಗಳೂರು: 31-21
ಶಿವಮೊಗ್ಗ: 32-23
ಬೆಳಗಾವಿ: 32-22
ಮೈಸೂರು: 32-22
ಮಂಡ್ಯ: 32-22 ಮಳೆ
ಮಡಿಕೇರಿ: 24-18
ರಾಮನಗರ: 32-22
ಹಾಸನ: 29-21
ಚಾಮರಾಜನಗರ: 32-22
ಚಿಕ್ಕಬಳ್ಳಾಪುರ: 30-21
ಕೋಲಾರ: 31-22
ತುಮಕೂರು: 32-22
ಉಡುಪಿ: 31-26
ಕಾರವಾರ: 31-27
ಚಿಕ್ಕಮಗಳೂರು: 28-20
ದಾವಣಗೆರೆ: 34-23
ಹುಬ್ಬಳ್ಳಿ: 34-23
ಚಿತ್ರದುರ್ಗ: 34-23
ಹಾವೇರಿ: 34-24
ಬಳ್ಳಾರಿ: 37-25
ಗದಗ: 36-23
ಕೊಪ್ಪಳ: 37-24
ರಾಯಚೂರು: 38-27
ಯಾದಗಿರಿ: 39-28
ವಿಜಯಪುರ: 38-24
ಬೀದರ್: 38-26
ಕಲಬುರಗಿ: 39-27
ಬಾಗಲಕೋಟೆ: 38-24