ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಪೂರ್ವ ಮುಂಗಾರುಮಳೆ ಅಬ್ಬರಿಸುತ್ತಿದೆ. ಇಂದಿನಿಂದ ರಾಜ್ಯದ ಹಲವೆಡೆ 6 ದಿನಗಳ ಕಾಲ ಮಳೆಯಾಗಲಿದೆ. ಇಂದು ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಭಾರೀ ಮಳೆಯ ಸಾಧ್ಯತೆ ಹಿನ್ನೆಲೆ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಇಂದು ಮುಂಜಾನೆಯಿಂದ ಮೋಡ ಕವಿದ ವಾತವರಣ ಇರಲಿದ್ದು, ಇಂದಿನಿಂದ ಎರಡು ದಿನಗಳ ಕಾಲ ಗಾಳಿ, ಗುಡುಗು ಮಿಂಚಿನಿಂದ ಕೂಡಿದ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ಎಚ್ಚರಿಸಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಂಗಳೂರಿನಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 30-22
ಮಂಗಳೂರು: 31-26
ಶಿವಮೊಗ್ಗ: 33-23
ಬೆಳಗಾವಿ: 34-23
ಮೈಸೂರು: 30-22
ಮಂಡ್ಯ: 31-22
ಮಡಿಕೇರಿ: 24-18
ರಾಮನಗರ: 29-22
ಹಾಸನ: 27-21
ಚಾಮರಾಜನಗರ: 29-22
ಚಿಕ್ಕಬಳ್ಳಾಪುರ: 28-22
ಕೋಲಾರ: 28-22
ತುಮಕೂರು: 29-22
ಉಡುಪಿ: 30-25
ಕಾರವಾರ: 32-27
ಚಿಕ್ಕಮಗಳೂರು: 25-19
ದಾವಣಗೆರೆ: 31-24
ಹುಬ್ಬಳ್ಳಿ: 33-24
ಚಿತ್ರದುರ್ಗ: 30-22
ಹಾವೇರಿ: 32-24
ಬಳ್ಳಾರಿ: 33-26
ಗದಗ: 34-24
ಕೊಪ್ಪಳ: 33-25
ರಾಯಚೂರು: 34-26
ಯಾದಗಿರಿ: 36-27
ವಿಜಯಪುರ: 37-26
ಬೀದರ್: 33-25
ಕಲಬುರಗಿ: 35-26
ಬಾಗಲಕೋಟೆ: 37-26