ರಾಜ್ಯದ ಹವಾಮಾನ ವರದಿ: 25-07-2023

Public TV
1 Min Read
WEATHER 1 e1679398614299

ರಾಜ್ಯದಲ್ಲಿ ನೈರುತ್ಯ ಮುಂಗಾರು ಮತ್ತಷ್ಟು ಚುರುಕುಗೊಂಡಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ಕರಾವಳಿ, ಒಳನಾಡಿನಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಒಳನಾಡಿನ ಹಲವೆಡೆ ಕಳೆದ 4 ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಮುಂದಿನ ಮೂರ್ನಾಲ್ಕು ದಿನವೂ ಮಳೆ ಮುಂದುವರೆಯಲಿದೆ ಎಂದು ಇಲಾಖೆ ಎಚ್ಚರಿಕೆ ನೀಡಿದೆ. ಹೆಚ್ಚಿನ ಮಳೆಯಿಂದಾಗಿ ಕರಾವಳಿ ಪ್ರದೇಶಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ. ಗುಡುಗು, ಮಿಂಚು ಸಹಿತ ಗಾಳಿ ಮಳೆಯಾಗುವ ಸಾಧ್ಯತೆಯಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

rain weather

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ 19 ಡಿಗ್ರಿ, ಕನಿಷ್ಠ 17 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.

ನಗರಗಳ ಹವಾಮಾನ ವರದಿ:
ಬೆಂಗಳೂರು: 24-19
ಮಂಗಳೂರು: 27-24
ಶಿವಮೊಗ್ಗ: 24-21
ಬೆಳಗಾವಿ: 23-21
ಮೈಸೂರು: 26-21

WEATHER 2

ಮಂಡ್ಯ: 27-21
ಮಡಿಕೇರಿ: 19-17
ರಾಮನಗರ: 29-25
ಹಾಸನ: 23-19
ಚಾಮರಾಜನಗರ: 27-21
ಚಿಕ್ಕಬಳ್ಳಾಪುರ: 23-19

weather

ಕೋಲಾರ: 25-21
ತುಮಕೂರು: 25-20
ಉಡುಪಿ: 27-24
ಕಾರವಾರ: 27-25
ಚಿಕ್ಕಮಗಳೂರು: 22-18
ದಾವಣಗೆರೆ: 25-21

weather

ಹುಬ್ಬಳ್ಳಿ: 24-21
ಚಿತ್ರದುರ್ಗ: 24-21
ಹಾವೇರಿ: 25-21
ಬಳ್ಳಾರಿ: 26-23
ಗದಗ: 25-21
ಕೊಪ್ಪಳ: 26-22

weather

ರಾಯಚೂರು: 26-33
ಯಾದಗಿರಿ: 27-23
ವಿಜಯಪುರ: 26-22
ಬೀದರ್: 26-22
ಕಲಬುರಗಿ: 27-33
ಬಾಗಲಕೋಟೆ: 26-22

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

Share This Article