Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆದಿ ಚುಂಚನಗಿರಿ ಕ್ಷೇತ್ರದಲ್ಲಿ ಜ.4-5ರಂದು ರಾಜ್ಯ ಮಟ್ಟದ ಯುವಜನೋತ್ಸವ: ನಾರಾಯಣಗೌಡ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಆದಿ ಚುಂಚನಗಿರಿ ಕ್ಷೇತ್ರದಲ್ಲಿ ಜ.4-5ರಂದು ರಾಜ್ಯ ಮಟ್ಟದ ಯುವಜನೋತ್ಸವ: ನಾರಾಯಣಗೌಡ

Districts

ಆದಿ ಚುಂಚನಗಿರಿ ಕ್ಷೇತ್ರದಲ್ಲಿ ಜ.4-5ರಂದು ರಾಜ್ಯ ಮಟ್ಟದ ಯುವಜನೋತ್ಸವ: ನಾರಾಯಣಗೌಡ

Public TV
Last updated: December 30, 2021 8:10 pm
Public TV
Share
2 Min Read
NARAYANA GOWDA MEETING 1
SHARE

ಮಂಡ್ಯ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಜನವರಿ 4-5 ರಂದು ಆದಿಚುಂಚನಗಿರಿಯಲ್ಲಿ ರಾಜ್ಯ ಮಟ್ಟದ ಯುವ ಜನೋತ್ಸವವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು. ಅದಕ್ಕೆ ಯಾವುದೇ ಕುಂದು ಕೊರತೆ ಆಗದ ರೀತಿ ನೋಡಿಕೊಳ್ಳಿ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಮಂಡ್ಯ ಉಸ್ತುವಾರಿ ಸಚಿವ ಡಾ.ನಾರಾಯಣಗೌಡ ಅಧಿಕಾರಿಗಳಿಗೆ ಸೂಚಿಸಿದರು.

NARAYANA GOWDA MEETING 2

ಮಂಡ್ಯ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಯುವಜನೋತ್ಸವ ಹಿನ್ನೆಲೆಯಲ್ಲಿ ಕೈಗೊಳ್ಳಲಾದ ಪೂರ್ವಭಾವಿ ಕ್ರಮಗಳ ಕುರಿತು ಇಂದು ಅಧಿಕಾರಿಗಳ ಜೊತೆ ಡಾ.ನಾರಾಯಣಗೌಡ ಸಭೆ ನಡೆಸಿದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಜನವರಿ 4-5ರಂದು ಆದಿಚುಂಚನಗಿರಿಯಲ್ಲಿ ರಾಜ್ಯ ಮಟ್ಟದ ಯುವ ಜನೋತ್ಸವವನ್ನು ಹಮ್ಮಿಕೊಳ್ಳಲಾಗಿದೆ. ಇದನ್ನೂ ಓದಿ: 700ರ ಗಡಿದಾಟಿದ ಕೊರೊನಾ – ಓಮಿಕ್ರಾನ್ 43ಕ್ಕೆ ಏರಿಕೆ

ಜನವರಿ 4ರಂದು ಆದಿ ಚುಂಚನಗಿರಿ ಪೀಠಾಧ್ಯಕ್ಷರಾದ ಶ್ರೀನಿರ್ಮಲಾನಂದನಾಥ ಸ್ವಾಮೀಜಿಯವರ ಸಾನಿಧ್ಯದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರಾದ ಡಾ.ನಾರಾಯಣಗೌಡ, ಡಾ.ಸಿ.ಎನ್ ಅಶ್ವಥ್ ನಾರಾಯಣ್, ಸುನಿಲ್ ಕುಮಾರ್ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

NARAYANA GOWDA MEETING

ವಿಜೇತರಿಗೆ ಬಹುಮಾನ ಹೆಚ್ಚಳ:
ಯುವಜನೋತ್ಸವದ ವಿವಿಧ ಭಾಗವಹಿಸುವ ಸ್ಪರ್ಧಿಗಳ ಬಹುಮಾನ ಮೊತ್ತವನ್ನು ಹೆಚ್ಚಿಸಲು ಸಚಿವ ಡಾ. ನಾರಾಯಣಗೌಡ ಕ್ರಮವಹಿಸಿದ್ದಾರೆ. ವೈಯಕ್ತಿಕ ಸ್ಪರ್ಧೆಗಳಿಗೆ ಮೊದಲ ಬಹುಮಾನ 15 ಸಾವಿರ, ಎರಡನೇ ಬಹುಮಾನ 10 ಸಾವಿರ, ಮೂರನೇ ಬಹುಮಾನ 5 ಸಾವಿರ, ಗುಂಪುಗಳಿಗೆ ನೀಡುವ ಮೊದಲ ಬಹುಮಾನ 25 ಸಾವಿರ, ಎರಡನೇ ಬಹುಮಾನ 25 ಸಾವಿರಕ್ಕೆ ಹೆಚ್ಚಳ ಮಾಡಿ ಡಾ.ನಾರಾಯಣಗೌಡ ಆದೇಶಿಸಿದರು. ಇದನ್ನೂ ಓದಿ: ನಾಳೆ ಬಂದ್ ಇಲ್ಲ – ವ್ಯಾಪಾರ, ವ್ಯವಹಾರ ನಡೆಸಬಹುದು: ಬೊಮ್ಮಾಯಿ

ಯುವಜನೋತ್ಸವಕ್ಕೆ ರಾಜ್ಯದ ಮೂಲೆ ಮೂಲೆಯಿಂದ ಎರಡು ಸಾವಿರಕ್ಕೂ ಅಧಿಕ ಪ್ರತಿಭಾನ್ವಿತರು ಆಗಮಿಸಲಿದ್ದಾರೆ. ಅವರಿಗೆ ಊಟ, ವಸತಿ ಸೇರಿದಂತೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಕೋವಿಡ್ ನಿಯಮಗಳನ್ನು ಪಾಲನೆಯೊಂದಿಗೆ ಎಲ್ಲಾ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ನೋಡಿಕೊಳ್ಳಬೇಕು. ಆ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಅಲ್ಲದೇ, ಪ್ರತಿಭಾನ್ವಿತರಿಗೆ ಹೆಚ್ಚಿನ ಪ್ರೋತ್ಸಾಹ ನೀಡುವ ಸಲುವಾಗಿ ಬಹುಮಾನ ಮೊತ್ತವನ್ನು ಹೆಚ್ಚಿಸಲಾಗಿದೆ. ರಾಜ್ಯ ಮಟ್ಟದ ಈ ಯುವಜನೋತ್ಸವ ಕಾರ್ಯಕ್ರಮ ಮಂಡ್ಯ ಜಿಲ್ಲೆಯಲ್ಲಿ ಹೆಮ್ಮೆಯಾಗಿದ್ದು, ಇದನ್ನು ಯಶಸ್ವಿಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು.

ಜನವರಿ 4-5 ರಂದು ನಡೆಯಲಿರುವ ರಾಜ್ಯ ಮಟ್ಟದ 'ಯುವ ಜನೋತ್ಸವ'ವನ್ನು ಯಶಸ್ವಿಗೊಳಿಸಬೇಕು. ಅದಕ್ಕೆ ಯಾವುದೇ ಕುಂದುಕೊರತೆ ಆಗದ ರೀತಿ ನೋಡಿಕೊಳ್ಳಿ ಎಂದು ಅಧಿಕಾರಿಗಳಿಗೆ ಸೂಚಿಸಿದ್ದೇನೆ.@CMofKarnataka
1/4 pic.twitter.com/BzCEzaG1ZO

— Dr. Narayana Gowda / ಡಾ.ನಾರಾಯಣ ಗೌಡ (@narayanagowdakc) December 30, 2021

ಮಂಡ್ಯದಲ್ಲಿ ನಡೆದರೆ ಇಂಡಿಯಾದಲ್ಲಿ ನಡೆದಂತೆ, ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ಮೂಲಕ ಮಂಡ್ಯದ ಅಸ್ಮಿತೆಯನ್ನು ಎತ್ತಿ ಹಿಡಿಯಬೇಕು ಎಂದು ಸಚಿವರು ಕರೆ ನೀಡಿದರು. ಯುವಜನೋತ್ಸವದಲ್ಲಿ ಭಾಗಿಯಾಗುವ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿ ಎಲ್ಲರೂ ಕಡ್ಡಾಯವಾಗಿ ಎರಡು ಡೋಸ್ ವ್ಯಾಕ್ಸಿನ್ ಪಡೆದಿರಬೇಕು. ಕಾರ್ಯಕ್ರಮ ನಡೆಯುವ ಸ್ಥಳಗಳಲ್ಲಿ ಕ್ಲಿನಿಕ್ ಸ್ಥಾಪನೆ, ಅಂಬುಲೆನ್ಸ್ ಸೇವೆ, ಊಟ, ವಸತಿ ಸೇರಿದಂತೆ ಯಾವುದೇ ಕುಂದು ಕೊರತೆಯಾಗದಂತೆ ಎಲ್ಲಾ ರೀತಿಯ ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಅಶ್ವಥಿ ಸಚಿವರಿಗೆ ಮಾಹಿತಿ ನೀಡಿದರು. ಇದನ್ನೂ ಓದಿ: ನಾಳೆಯ ಕರ್ನಾಟಕ ಬಂದ್ ವಾಪಸ್

ಸಭೆಯಲ್ಲಿ ನಾಗಮಂಗಲ ಶಾಸಕ ಸುರೇಶ್ ಗೌಡ, ಜಿಲ್ಲಾಧಿಕಾರಿ ಅಶ್ವಥಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯುಕ್ತ ಗೋಪಾಲಕೃಷ್ಣ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಸೇರಿದಂತೆ ಜಿಲ್ಲಾ ಮಟ್ಟದ ಹಲವು ಅಧಿಕಾರಿಗಳು ಭಾಗವಹಿಸಿದ್ದರು.

TAGGED:adi chunchanagiriKarnataka State Level Yuva Janotsavamandyaಆದಿ ಚುಂಚನಗಿರಿಕರ್ನಾಟಕ ರಾಜ್ಯ ಮಟ್ಟದ ಯುವಜನೋತ್ಸವಮಂಡ್ಯ
Share This Article
Facebook Whatsapp Whatsapp Telegram

Cinema news

kavya gowda
ನಟಿ ಕಾವ್ಯ ಗೌಡ, ಪತಿ ಮೇಲೆ ಹಲ್ಲೆ ಆರೋಪ; ದೂರು ದಾಖಲು
Cinema Latest Main Post Sandalwood
Raghavendra Chitravani 1
ರಾಘವೇಂದ್ರ ಚಿತ್ರವಾಣಿಗೆ 50ರ ಸಂಭ್ರಮ – ಸಿನಿ ಗಣ್ಯರಿಂದ ಲೋಗೋ ಲಾಂಚ್
Cinema Latest Sandalwood Top Stories
Gilli Nata 6
ಚನ್ನಪಟ್ಟಣದಲ್ಲಿ ಗಿಲ್ಲಿ ಕ್ರೇಜ್ – ವೇದಿಕೆ ಏರಿದ ಅಭಿಮಾನಿಗಳ ನಿಯಂತ್ರಣಕ್ಕೆ ಪೊಲೀಸರ ಹರಸಾಹಸ
Cinema Districts Karnataka Latest Ramanagara States Top Stories
Anantha Padmanabha
ಹಿಟ್‌ ಡೈಲಾಗ್‌ ರೈಟರ್‌ ಪ್ರಶಾಂತ್‌ ರಾಜಪ್ಪ ನಿರ್ದೇಶನದ ಚೊಚ್ಚಲ ಚಿತ್ರದ ಟೈಟಲ್ ರಿವೀಲ್
Cinema Latest Sandalwood

You Might Also Like

Modi India Europe Trade Deal
Bengaluru City

1 ಒಪ್ಪಂದ, 27 ಯುರೋಪ್‌ ಮಾರುಕಟ್ಟೆಗಳು – ಕರ್ನಾಟಕಕ್ಕೆ ಏನು ಪ್ರಯೋಜನ?

Public TV
By Public TV
2 minutes ago
chalavadi narayanaswamy council
Bengaluru City

ಅಬಕಾರಿ ‌ಇಲಾಖೆ ಅಕ್ರಮ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ಆಗಲಿ: ಬಿಜೆಪಿ

Public TV
By Public TV
11 minutes ago
Supreme Court
Court

ಮಹಾಕಾಳೇಶ್ವರ ದೇವಸ್ಥಾನದಲ್ಲಿ VIP ದರ್ಶನ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

Public TV
By Public TV
14 minutes ago
Rs 30 Lakh Cash Found In Maharashtra Registered Car Near Andhra Temple
Crime

ಶ್ರೀಶೈಲಂ ದೇವಾಲಯದ ಬಳಿ ಮಹಾರಾಷ್ಟ್ರ ನೋಂದಣಿಯ ಕಾರಲ್ಲಿ 30 ಲಕ್ಷ ರೂ. ಪತ್ತೆ!

Public TV
By Public TV
18 minutes ago
Suresh Kumar
Bengaluru City

ಮನೆಗೆ ಪೋಸ್ಟರ್ ಅಂಟಿಸಿದ ಕೇಸ್ – ಸದನದಲ್ಲಿ ಸರ್ಕಾರದ ಗಮನ ಸೆಳೆದು ರಕ್ಷಣೆ ಕೋರಿದ ಸುರೇಶ್ ಕುಮಾರ್

Public TV
By Public TV
18 minutes ago
ex army officer toll udupi
Latest

ಉಡುಪಿಯ ಸಾಸ್ತಾನ ಟೋಲ್ ಪ್ಲಾಜಾದಲ್ಲಿ ನಿವೃತ್ತ ಯೋಧನಿಗೆ ಅಪಮಾನ – NHAI ಹೇಳಿದ್ದೇನು?

Public TV
By Public TV
31 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?