ರಾಜ್ಯದ ಹಲವೆಡೆ ಒಂದು ವಾರದಿಂದ ಮಳೆಯಾಗುತ್ತಿದ್ದು, ಇಂದು ಸಹ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಉಷ್ಣಾಂಶ ಏರಿಕೆಯಾಗುವ ಸಾಧ್ಯತೆಯಿದೆ ಹಾಗೂ ಮೋಡ ಕವಿದ ವಾತಾವರಣ ಇರುವ ಸಾಧ್ಯತೆಯಿದೆ. ಉತ್ತರ ಒಳನಾಡಿದ ಕೆಲ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಇಂದು ಕೂಡ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 28-20
ಮಂಗಳೂರು: 30-24
ಶಿವಮೊಗ್ಗ: 29-21
ಬೆಳಗಾವಿ: 29-20
ಮೈಸೂರು: 31-21
ಮಂಡ್ಯ: 31-22
ಮಡಿಕೇರಿ: 24-17
ರಾಮನಗರ: 31-23
ಹಾಸನ: 28-20
ಚಾಮರಾಜನಗರ: 31-22
ಚಿಕ್ಕಬಳ್ಳಾಪುರ: 28-20
ಕೋಲಾರ: 29-21
ತುಮಕೂರು: 29-21
ಉಡುಪಿ: 29-24
ಕಾರವಾರ: 30-25
ಚಿಕ್ಕಮಗಳೂರು: 27-19
ದಾವಣಗೆರೆ: 31-22
ಹುಬ್ಬಳ್ಳಿ: 31-22
ಚಿತ್ರದುರ್ಗ: 29-21
ಹಾವೇರಿ: 31-22
ಬಳ್ಳಾರಿ: 32-23
ಗದಗ: 31-22
ಕೊಪ್ಪಳ: 32-23
ರಾಯಚೂರು: 32-23
ಯಾದಗಿರಿ: 32-24
ವಿಜಯಪುರ: 31-22
ಬೀದರ್: 30-22
ಕಲಬುರಗಿ: 32-23
ಬಾಗಲಕೋಟೆ: 32-23