ರಾಜ್ಯಾದ್ಯಂತ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಇಂದು ಸಹ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುರಿಯಲಿದೆ. ರಾಜಧಾನಿ ಬೆಂಗಳೂರಿನಲ್ಲಿ ಇನ್ನೂ 3 ದಿನಗಳ ಕಾಲ ಜಡಿ ಮಳೆಯಾಗಲಿದ್ದು, ಇಂದು ಸಹ ಬೆಂಗಳೂರಿನಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಭಾಗಕ್ಕೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.
ಬೆಂಗಳೂರಿನಲ್ಲಿ ಗುರುವಾರ 4.2 ಮಿ.ಮಿ ಮಳೆಯಾಗಿದೆ. ಆದರೆ ಇಂದು ಇನ್ನೂ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನಲೆ ಇನ್ನೂ ಮೂರು ದಿನ ಮಳೆಯಾಗುವ ಸಾಧ್ಯತೆ ಇದೆ ಎಂಬು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮಳೆಯ ಜೊತೆಗೆ ಬೆಂಗಳೂರಿನಲ್ಲಿ ಕೊರೆಯುವ ಚಳಿಯ ವಾತಾವರಣ ಮುಂದುವರೆಯಲಿದೆ ಎಂದು ಹವಾಮಾನ ತಜ್ಞರಾದ ಸದಾನಂದ ಅಡಿಗ ಮಾಹಿತಿ ನೀಡಿದ್ದಾರೆ.
ಬೆಂಗಳೂರಿನಲ್ಲಿ ಗರಿಷ್ಟ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ಯಾದಗಿರಿ ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.
ನಗರಗಳ ಇಂದಿನ ಹವಾಮಾನ ವರದಿ:
ಬೆಂಗಳೂರು: 26-19
ಮಂಗಳೂರು: 29-24
ಶಿವಮೊಗ್ಗ: 27-21
ಬೆಳಗಾವಿ: 29-21
ಮೈಸೂರು: 27-20
ಮಂಡ್ಯ: 27-20
ರಾಮನಗರ: 26-14
ಮಡಿಕೇರಿ: 22-17
ಹಾಸನ: 25-19
ಚಾಮರಾಜನಗರ: 27-20
ಚಿಕ್ಕಬಳ್ಳಾಪುರ: 24-18
ಕೋಲಾರ: 26-20
ತುಮಕೂರು: 26-20
ಉಡುಪಿ: 29-24
ಕಾರವಾರ: 30-26
ಚಿಕ್ಕಮಗಳೂರು: 24-18
ದಾವಣಗೆರೆ: 28-21
ಚಿತ್ರದುರ್ಗ: 26-21
ಹಾವೇರಿ: 28-22
ಬಳ್ಳಾರಿ: 28-22
ಗದಗ: 28-21
ಕೊಪ್ಪಳ: 29-22
ರಾಯಚೂರು: 29-22
ಯಾದಗಿರಿ: 31-23
ವಿಜಯಪುರ: 30-22
ಬೀದರ್: 27-21
ಕಲಬುರಗಿ: 30-22
ಬಾಗಲಕೋಟೆ: 30-22