ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆ ರಾಜ್ಯದ ರಾಜಧಾನಿ ಬೆಂಗಳೂರು ಸೇರಿದಂತೆ ಹಲವೆಡೆ ಮೋಡ ಕವಿದ ವಾತಾವರಣ ಇದ್ದು, ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ, ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಇಂದು ಮತ್ತು ನಾಳೆ ದಕ್ಷಿಣ ಒಳನಾಡು ಜಿಲ್ಲೆಗಳ ಹಲವೆಡೆ ಜೋರು ಮಳೆಯಾಗುವ ಸಾಧ್ಯತೆಯಿದ್ದು, ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 23-22
ಮಂಗಳೂರು: 31-26
ಶಿವಮೊಗ್ಗ: 28-21
ಬೆಳಗಾವಿ: 28-20
ಮೈಸೂರು: 26-22
ಮಂಡ್ಯ: 26-22
ಮಡಿಕೇರಿ: 27-19
ರಾಮನಗರ: 25-22
ಹಾಸನ: 24-20
ಚಾಮರಾಜನಗರ: 26-22
ಚಿಕ್ಕಬಳ್ಳಾಪುರ: 22-21
ಕೋಲಾರ: 21-21
ತುಮಕೂರು: 24-21
ಉಡುಪಿ: 31-25
ಕಾರವಾರ: 31-23
ಚಿಕ್ಕಮಗಳೂರು: 24-18
ದಾವಣಗೆರೆ: 29-21
ಹುಬ್ಬಳ್ಳಿ: 29-21
ಚಿತ್ರದುರ್ಗ: 27-21
ಹಾವೇರಿ: 29-21
ಬಳ್ಳಾರಿ: 29-22
ಗದಗ: 28-20
ಕೊಪ್ಪಳ: 29-21
ರಾಯಚೂರು: 30-23
ಯಾದಗಿರಿ: 31-23
ವಿಜಯಪುರ: 30-21
ಬೀದರ್: 28-19
ಕಲಬುರಗಿ: 31-22
ಬಾಗಲಕೋಟೆ: 30-22