Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 70ನೇ ಗಣರಾಜ್ಯೋತ್ಸವ- ದೆಹಲಿಯ ರಾಜ್‍ಪಥದಲ್ಲಿ ಮೊಳಗಿತು ಕನ್ನಡದ ಕಹಳೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | 70ನೇ ಗಣರಾಜ್ಯೋತ್ಸವ- ದೆಹಲಿಯ ರಾಜ್‍ಪಥದಲ್ಲಿ ಮೊಳಗಿತು ಕನ್ನಡದ ಕಹಳೆ

Latest

70ನೇ ಗಣರಾಜ್ಯೋತ್ಸವ- ದೆಹಲಿಯ ರಾಜ್‍ಪಥದಲ್ಲಿ ಮೊಳಗಿತು ಕನ್ನಡದ ಕಹಳೆ

Public TV
Last updated: January 26, 2019 11:55 am
Public TV
Share
3 Min Read
tableau collage
SHARE

– ಕರ್ನಾಟಕ ಸ್ತಬ್ಧಚಿತ್ರದ ವಿಶೇಷತೆಯೇನು..?

ನವದೆಹಲಿ: ಇಲ್ಲಿನ ರಾಜ್‍ಪಥ್ ರಸ್ತೆಯಲ್ಲಿ ನಡೆದ 70ನೇ ಗಣರಾಜ್ಯೋತ್ಸವ ಆಚರಣೆಯ ಅಂಗವಾಗಿ ಕರ್ನಾಟಕದಿಂದ ಈ ಬಾರಿ ಗಾಂಧೀಜಿ ಹಾಗೂ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಸ್ತಬ್ಧ ಚಿತ್ರವನ್ನು ಪ್ರದರ್ಶಿಸಲಾಯಿತು. ಉದಯವಾಯಿತು ನಮ್ಮ ಚೆಲುವ ಕನ್ನಡ ನಾಡು ಹಾಡಿನ ಮೂಲಕ ಎಲ್ಲರ ಗಮನಸೆಳೆಯಿತು.

ಮಹಾತ್ಮ ಗಾಂಧೀಜಿ ಅವರ 150ನೇ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಈ ಬಾರಿ 16 ರಾಜ್ಯಗಳ ಮತ್ತು 6 ಇಲಾಖೆಗಳ ಒಟ್ಟು 22 ಸ್ತಬ್ಧ ಚಿತ್ರಗಳು ಪ್ರದರ್ಶನವಾಗುತ್ತಿದೆ. ಸ್ತಬ್ಧ ಚಿತ್ರಗಳಲ್ಲಿ ಗಾಂಧೀಜಿ ಅವರಿಗೆ ವಿಶೇಷ ಗೌರವ ಸಲ್ಲಿಸಲಾಗುತ್ತಿದೆ. ಹಾಗೆಯೇ ಕರ್ನಾಟಕದಿಂದ ಈ ಬಾರಿ ಬೆಳಗಾವಿಯಲ್ಲಿ ನಡೆದ ಅಧಿವೇಶನದ ಬಗ್ಗೆ ಸ್ತಬ್ಧಚಿತ್ರ ಪ್ರದರ್ಶಿಸಿದೆ.

rd

ಸ್ತಬ್ಧಚಿತ್ರದ ವಿಶೇಷತೆಯೇನು..?
ಭಾರತ ರಾಷ್ಟ್ರೀಯ ಕಾಂಗ್ರೆಸ್‍ನ ಐತಿಹಾಸಿಕ ಅಧಿವೇಶನ ನಡೆದ ಆವರಣಕ್ಕೆ ವಿಜಯನಗರ ಎಂದು ನಾಮಕರಣ ಮಾಡಲಾಗಿತ್ತು. ಅಲ್ಲದೇ ಅಧಿವೇಶನ ನಡೆದ ಸ್ಥಳದ ಪ್ರವೇಶ ದ್ವಾರವನ್ನು ಹಂಪೆಯ ವಿರೂಪಾಕ್ಷ ದೇಗುಲದ ಗೋಪುರದ ವಿನ್ಯಾಸದಲ್ಲಿ ಅಲಂಕರಿಸಲಾಗಿತ್ತು. ಅಧಿವೇಶನದಲ್ಲಿ ಭಾಗವಹಿಸಲು ಆಗಮಿಸಿದ್ದ ಪ್ರತಿನಿಧಿಗಳು ಮತ್ತು ಆಹ್ವಾನಿತರು ತಂಗಲು ಕುಟೀರಗಳನ್ನು ಬಿದಿರು ಮತ್ತು ಖಾದಿ ವಸ್ತ್ರಗಳಿಂದ ರೂಪಿಸಲಾಗಿತ್ತು. ಕುಡಿಯುವ ನೀರು ಸರಬರಾಜಿಗಾಗಿ ಹೊಸ ಬಾವಿಯೊಂದನ್ನು ನಿರ್ಮಿಸಿದ್ದು, ಅದಕ್ಕೆ ಪಂಪಾ ಸರೋವರ ಎಂದು ಹೆಸರಿಡಲಾಗಿತ್ತು. ಪ್ರತಿನಿಧಿಗಳ ಊಟೋಪಚಾರದ ವ್ಯವಸ್ಥೆಗೆ ಬೃಹತ್ ಪಾಕಶಾಲೆ ನಿರ್ಮಿಸಲಾಗಿತ್ತು. ಸಮಾವೇಶದ ಇಡೀ ಪ್ರದೇಶದಲ್ಲಿ ಬೆಳಕಿನ ವ್ಯವಸ್ಥೆ ಮಾಡಲು ಮುಂಬೈನಿಂದ ಸಾವಿರಾರು ಸಂಖ್ಯೆಯಲ್ಲಿ ಲಾಟೀನ್‍ಗಳು ಮತ್ತು ಪೆಟ್ರೋಮ್ಯಾಕ್ಸ್ ದೀಪಗಳನ್ನು ತರಿಸಲಾಗಿತ್ತು. ನಾ. ಸೂ. ಹರ್ಡಿಕರ್ ಅವರು ತರಬೇತಿಗೊಳಿಸಿದ್ದ ಹಿಂದೂಸ್ಥಾನ್ ಸೇವಾ ದಳದ ಸ್ವಯಂ ಸೇವಕರು, ಪ್ರತಿನಿಧಿಗಳು ಮತ್ತು ಆಹ್ವಾನಿತರ ಸೇವೆಯ ಮೇಲುಸ್ತುವಾರಿ ವಹಿಸಿದ್ದರು.

#republicdayindia Tableau of Karnataka is based on the 39th session of the Indian National Congress held in Belagavi in 1924, which was presided over by Mahatma Gandhi pic.twitter.com/tWsztHczoY

— ANI (@ANI) January 26, 2019

ಮಹಾತ್ಮಾ ಗಾಂಧೀಜಿಯವರು ಮಹಾಧಿವೇಶನಕ್ಕೆ ಆಗಮಿಸಿ ಅಲ್ಲಿ ಸಹೋದರರು, ಸರೋಜಿನಿ ನಾಯ್ಡು, ಜವಾಹರಲಾಲ್ ನೆಹರು, ಸರದಾರ್ ವಲ್ಲಭಾಬಾಯ್ ಪಟೇಲ್ ಮತ್ತಿತರ ಗಣ್ಯನಾಯಕರು ಅವರೊಡನೆ ಇದ್ದರು. ಗಂಗಾಧರ ದೇಶಪಾಂಡೆ ಅವರ ಅಧ್ಯಕ್ಷತೆಯ ಸ್ವಾಗತ ಸಮಿತಿ ಜೊತೆಗೆ ಅಪಾರ ಸಂಖ್ಯೆಯಲ್ಲಿದ್ದ ಗಾಂಧೀ ಅಭಿಮಾನಿಗಳು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಗಣ್ಯರ ಸಮೂಹವನ್ನು ಆತ್ಮೀಯತೆಯಿಂದ ಬರ ಮಾಡಿಕೊಂಡು ಮೆರವಣಿಗೆ ಮೂಲಕ ಕಾಂಗ್ರೆಸ್ ಶಿಬಿರಕ್ಕಿ ಕರೆದೊಯ್ದರು. ಅಧಿವೇಶನದ ಸಂದರ್ಭದಲ್ಲಿ ಕರ್ನಾಟಕ ಮತ್ತು ಕನ್ನಡ ಭಾಷೆಯ ಇತಿಹಾಸ ಮತ್ತು ಸಂಸ್ಕೃತಿಯನ್ನು ಬಿಂಬಿಸಲು ಸರ್ವ ಪ್ರಯತ್ನಗಳನ್ನು ಮಾಡಲಾಗಿತ್ತು. ಸಂಗೀತ ದಿಗ್ಗಜ ವೀಣೆ ಶೇಷಣ್ಣನವರು ವೀಣಾವಾದನ ಮತ್ತು ಹುಯಿಲಗೋಳ ನಾರಾಯಣರಾವ್ ಅವರು ಕನ್ನಡ ರಾಜ್ಯೋದಯದ ಕುರಿತು ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು ಎಂಬ ಗೀತೆಯನ್ನು ಹಾಡುವ ಮೂಲಕ ಮಹಾಧಿವೇಶನಕ್ಕೆ ವಿಶೇಷ ಮೆರುಗನ್ನು ನೀಡಿದ್ದರು.

rd 1

ಬೆಳಗಾವಿ ಮಹಾಧಿವೇಶನದ ವಿಶೇಷವೆಂದರೆ ಸರಿಯಾಗಿ ಮಧ್ಯಾಹ್ನ 3.00ಗಂಟೆಗೆ ಎಲ್ಲ ಕಲಾಪಗಳು ಪ್ರಾರಂಭವಾದದ್ದು, ಮೊಟ್ಟ ಮೊದಲ ಬಾರಿಗೆ ಧ್ವಜಾರೋಹಣದ ಪದ್ಧತಿಯನ್ನು ಪ್ರಾರಂಭಿಸಿಲಾಗಿತ್ತು. ಅಲ್ಲದೇ ಬಿಳಿ, ಹಸಿರು ಮತ್ತು ಕೆಂಪು ಬಣ್ಣದ ಜೊತೆಗೆ ಮಧ್ಯಭಾಗದಲ್ಲಿ ಚರಕದ ಚಿತ್ರವುಳ್ಳ ತ್ರಿವರ್ಣ ಧ್ವಜವನ್ನು ಮೊದಲ ಬಾರಿಗೆ ಹಾರಿಸಲಾಯಿತು. ವಂದೇ ಮಾತರಂ ಗೀತೆಯನ್ನು ಮೊದಲ ಬಾರಿಗೆ ಪಂಡಿತ್ ವಿಷ್ಣು ದಿಗಂಬರ್ ಪಾಲುಸ್ಕರ್ ಮತ್ತು ಅವರ ಶಿಷ್ಯ ಗಣ ವಿಶಿಷ್ಟ ರಾಗದೊಂದಿಗೆ ನುಡಿಸಿದ್ದು ಮತ್ತೊಂದು ವಿಶೇಷವಾಗಿದೆ. ಇದಕ್ಕೂ ಮೊದಲು ಗುರುದೇವ ರವೀಂದ್ರ ನಾಥ್ ಠಾಗೂರ್ ಅವರು ವಂದೇ ಮಾತರಂ ಗೀತೆಯನ್ನು ಹಾಡಿದ್ದು ಉಲ್ಲೇಖಾರ್ಹ.

rd 2

39ನೇ ಕಾಂಗ್ರೆಸ್ ಮಹಾಧಿವೇಶನದ ಅಧ್ಯಕ್ಷ ಸ್ಥಾನದಿಂದ ಮಹಾತ್ಮ ಗಾಂಧೀಜಿಯವರು ಹಲವು ಕ್ರಾಂತಿಖಾರಿ ಮತ್ತು ವಿನೂತನ ವಿಷಯಗಳು ಪ್ರತಿಪಾದನೆ ಮಾಡಿದ್ದರು. ಹಿಂದೂ-ಮುಸ್ಲಿಂ ಏಕತೆ, ವಿದೇಶಿ ವಸ್ತುಗಳು ಬಹಿಷ್ಕಾರ, ಚರಕ ಮತ್ತು ಖಾದಿ ನೂಲುವಿಕೆಗೆ ಪ್ರೋತ್ಸಾಹ, ಅಸ್ಪೃಶ್ಯತೆ ನಿವಾರಣೆಗೆ ಶ್ರಮಿಸುವುದು ಇತ್ಯಾದಿ ವಿಚಾರಗಳ ಬಗ್ಗೆ ಗಾಂಧೀಜಿಯವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಬಲವಾದ ಪ್ರತಿಪಾದನೆ ಮಾಡಿದ್ದರು.

ಮಹಾತ್ಮಾ ಗಾಂಧೀಜಿಯವರ ರಚನಾತ್ಮಕ ಕಾರ್ಯಕ್ರಮಗಳಿಗೆ ಕರ್ನಾಟಕ ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿತು. ಖಾದಿ ಪ್ರಚಾರ ಮತ್ತು ಗ್ರಾಮೋದ್ಯೋಗದ ಬಗ್ಗೆ ಕರ್ನಾಟಕದ ಹಲವು ಸಂಘ ಸಂಸ್ಥೆಗಳು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡವು. ಹರಿಜನೋದ್ದಾರಕ್ಕಾಗಿ ರಾಜ್ಯದ ವಿವಿಧ ಸ್ಥಳಗಳಲ್ಲಿ ಕಲ್ಯಾಣ ಕೇಂದ್ರಗಳನ್ನು ಪ್ರಾರಂಭಿಸಲಾಯಿತು. 1922 ರಿಂದ 25ರ ನಡುವೆ ರಾಷ್ಟ್ರೀಯ ನೇತಾರರುಗಳಾದ ಸಿ. ರಾಜಗೋಪಾಲಚಾರಿ, ಚಿತ್ತರಂಜನ್ ದಾಸ್, ಲಾಲಾ ಲಜಪತ್ ರಾಯ್, ಎಸ್. ಶ್ರೀನಿವಾಸ್ ಐಯ್ಯಂಗಾರ್, ಪಟ್ಟಾಭಿ ಸೀತಾರಾಮಯ್ಯ, ಜಮ್ನಾದಾಸ ಮೆಹೆತಾ, ಕೊಂಡ ವೆಂಕಟ್ಟಪ್ಪಯ್ಯ ಮತ್ತಿತರರು ಕರ್ನಾಟಕದ ಮೂಲೆ-ಮೂಲೆಗಳಿಗೆ ಭೇಟಿ ನೀಡಿ ರಾಷ್ಟ್ರೀಯ ಜಾಗೃತಿ ಪ್ರಜ್ಞೆಯನ್ನು ಜೀವಂತವಿರಿಸಿದರು. ಕರ್ನಾಟಕದ ನಾಯಕರುಗಳಾದ ನಾ.ಸೂ ಹರ್ಡೀಕರ್, ಶ್ರೀನಿವಾಸ್ ರಾವ್ ಕೌಜಲಗಿ, ಗಂಗಾಧರ ರಾವ್ ದೇಶಪಾಂಡೆ, ಕಡಪ ರಾಘವೇಂದ್ರ ರಾವ್, ಆರ್. ಆರ್ ದಿವಾಕರ್, ಕೃಷ್ಣ ರಾವ್ ಮುದವೇಡಕರ್ ಮತ್ತಿತರರು ಸ್ವಾತಂತ್ರ್ಯ ಸಂಗ್ರಾಮದ ಜ್ವಾಲೆ ಪ್ರಜ್ವಲಿಸಲು ಶ್ರಮಿಸಿದ್ದರು.

https://www.youtube.com/watch?v=Fn2jwU5ayD4

https://www.youtube.com/watch?v=QmK1zbMMIv4

https://www.youtube.com/watch?v=QxzTqdy-KS4

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:Mahatma GandhiNew DelhiPublic TVrepublic daytableauಗಣರಾಜ್ಯೋತ್ಸವ ದಿನಟ್ಯಾಬ್ಲೊನವದೆಹಲಿಪಬ್ಲಿಕ್ ಟಿವಿಮಹಾತ್ಮ ಗಾಂಧೀಜಿ
Share This Article
Facebook Whatsapp Whatsapp Telegram

Cinema news

Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories
Rajath Kishan
ಬೆದರಿಕೆ, ನಿಂದನೆ ಆರೋಪ – ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR
Bengaluru City Cinema Districts Karnataka Latest Sandalwood Top Stories
colors kannada New serial rani
ರಾಣಿ – ಅಮ್ಮ ಮಗಳ ಭಾವುಕ ಪಯಣ..!
Cinema Latest Sandalwood Top Stories
Vijay trisha
ಡಿವೋರ್ಸ್ ಕೇಸ್ ಮಧ್ಯೆ ಒಂದೇ ಬಣ್ಣದ ಉಡುಗೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡ ವಿಜಯ್-ತ್ರಿಶಾ
Cinema Latest National Top Stories

You Might Also Like

nari narayani mahadevamma
Bengaluru City

ಅನಾಥ ಶವಗಳಿಗೆ ಮುಕ್ತಿ ನೀಡೋ ಮಹದೇವಮ್ಮಗೆ ನಾರಿ ನಾರಾಯಣಿ ಪ್ರಶಸ್ತಿ

Public TV
By Public TV
5 minutes ago
Public TV Nari Narayani Award 2026 Blind Cricketer Deepika
Bengaluru City

ಕ್ರಿಕೆಟ್‌ ಪಟು ದೀಪಿಕಾಗೆ ‘ನಾರಿ ನಾರಾಯಣಿ’ ಪ್ರಶಸ್ತಿ

Public TV
By Public TV
37 minutes ago
chain snatching in ramanagara three accused arrested
Crime

ಅಡ್ರೆಸ್ ಕೇಳುವ ನೆಪದಲ್ಲಿ ಒಂದೇ ದಿನ ಮೂರು ಕಡೆ ಸರಗಳ್ಳತನ – ಆರೋಪಿಗಳು ಅಂದರ್‌

Public TV
By Public TV
55 minutes ago
public tv nari narayani 2026 award
Bengaluru City

ಮಹಿಳಾ ದಿನಾಚರಣೆ: ಪಬ್ಲಿಕ್‌ ಟಿವಿಯಿಂದ ಸಾಧಕಿಯರಿಗೆ ‘ನಾರಿ ನಾರಾಯಣಿ’ ಪ್ರಶಸ್ತಿ ಪ್ರದಾನ

Public TV
By Public TV
59 minutes ago
Davanagere Fire
Davanagere

ಜಗಳೂರು | ತೋಟಕ್ಕೆ ಬೆಂಕಿ ಇಟ್ಟ ಕಿಡಿಗೇಡಿಗಳು – 1500ಕ್ಕೂ ಹೆಚ್ಚು ಅಡಿಕೆ ಗಿಡಗಳು ಸುಟ್ಟು ಕರಕಲು

Public TV
By Public TV
2 hours ago
car hits lorry three dead in kaggalipura
Crime

ರಾಮನಗರ | ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ – ಮೂವರು ದುರ್ಮರಣ, ಮತ್ತೋರ್ವನ ಸ್ಥಿತಿ ಗಂಭೀರ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?