ಧಾರವಾಡ: ಕರ್ನಾಟಕ ವಿಶ್ವವಿದ್ಯಾಲಯದ (Karnataka University) ನೌಕರರ ಸಹಕಾರ ಸಂಘದ ಚುನಾವಣೆಯಲ್ಲಿ (Election) ಸ್ಪರ್ಧಿಸಿ ಸೋತ ಅಭ್ಯರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ನಗರದ ಮುರುಘಾ ಮಠದ ಬಳಿ ನಡೆದಿದೆ.
ವಿಶ್ವವಿದ್ಯಾಲಯದ ಲೆಕ್ಕಪತ್ರ ವಿಭಾಗದ ಸೂಪರಿಂಟೆಂಡೆಂಟ್ ಚಂದ್ರಕಾಂತ್ ಸಾವಳಗಿ (55) ನೇಣಿಗೆ ಶರಣಾದ ವ್ಯಕ್ತಿಯಾಗಿದ್ದಾರೆ. ಶನಿವಾರ ಚುನಾವಣೆ ಫಲಿತಾಂಶ ಬಂದ ಮೇಲೆ ಮನೆಗೆ ವಾಪಸ್ ಆಗಿದ್ದ ಅವರು ಅದೇ ದಿನ ರಾತ್ರಿ ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ. ಮೂರ್ನಾಲ್ಕು ದಿನಗಳಿಂದ ಮನೆಯ ಬಾಗಿಲು ತೆರೆಯದ ಕಾರಣ ಸ್ಥಳೀಯರು ಅನುಮಾನ ವ್ಯಕ್ತಪಡಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಈ ವೇಳೆ ಪೊಲೀಸರು ಬಂದು ಬಾಗಿಲು ತೆರೆದಾಗ ಘಟನೆ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಸೋಮಾರಿ ಸಿದ್ದ ಪದ ಬಳಸಿದ್ದು ಸಿದ್ದರಾಮಯ್ಯರಿಗೆ ಅಲ್ಲ: ಪ್ರತಾಪ್ ಸಿಂಹ ಸ್ಪಷ್ಟನೆ
ಚುನಾವಣೆಯಲ್ಲಿ ಸೋಲನುಭವಿಸಿದ್ದಕ್ಕೆ ಚಂದ್ರಕಾಂತ್ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಶಹರ ಠಾಣೆ ಪೊಲೀಸರು (Police) ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಶಸ್ತ್ರಚಿಕಿತ್ಸೆ ವೇಳೆ ವೃದ್ಧೆಯ ತಲೆಗೆ 3 ಬಾರಿ ಪಂಚ್ ಕೊಟ್ಟ ವೈದ್ಯ- ಮುಂದೇನಾಯ್ತು?