Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಗರ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ – ಕಾಂಗ್ರೆಸ್ ಅತಿ ದೊಡ್ಡ ಪಕ್ಷ, ಯಾರಿಗೆ ಎಷ್ಟು ಸ್ಥಾನ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಗರ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ – ಕಾಂಗ್ರೆಸ್ ಅತಿ ದೊಡ್ಡ ಪಕ್ಷ, ಯಾರಿಗೆ ಎಷ್ಟು ಸ್ಥಾನ?

Bengaluru City

ನಗರ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ – ಕಾಂಗ್ರೆಸ್ ಅತಿ ದೊಡ್ಡ ಪಕ್ಷ, ಯಾರಿಗೆ ಎಷ್ಟು ಸ್ಥಾನ?

Public TV
Last updated: November 14, 2019 7:09 pm
Public TV
Share
4 Min Read
CONGRESS JDS BJP copy
SHARE

ಬೆಂಗಳೂರು: ನಗರ ಸ್ಥಳಿಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು ಕಾಂಗ್ರೆಸ್ ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದೆ.

ರಾಮನಗರ, ಚಿಕ್ಕಬಳ್ಳಾಪುರ ಕಾಂಗ್ರೆಸ್ ಗೆದ್ದುಕೊಂಡರೆ ಮಂಗಳೂರು, ಜೋಗ್ ಕಾರ್ಗಲ್, ಕಂಪ್ಲಿಯನ್ನು ಬಿಜೆಪಿ ಗೆದ್ದುಕೊಂಡಿದೆ. ಮಾಗಡಿ ಪುರಸಭೆಯನ್ನು ಜೆಡಿಎಸ್ ಗೆದ್ದುಕೊಂಡಿದೆ.

ಒಟ್ಟು 418 ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, ಇದರಲ್ಲಿ ರಾಮನಗರ, ಚಿಕ್ಕಬಳ್ಳಾಪುರ ನಗರಗಳ ಗೆಲುವಿನೊಂದಿಗೆ ಕಾಂಗ್ರೆಸ್ ಒಟ್ಟು 152 ಸ್ಥಾನಗಳನ್ನು ಗೆದ್ದುಕೊಂಡಿದೆ. ಕಾಂಗ್ರೆಸ್ ಬಿಟ್ಟರೆ ಬಿಜೆಪಿ 125 ಸ್ಥಾನಗಳನ್ನು ಗೆದ್ದುಕೊಂಡಿದೆ. 63 ಸ್ಥಾನವನ್ನು ಗೆದ್ದಿರುವ ಜೆಡಿಎಸ್ ಪಕ್ಷ ಮೂರನೇ ಸ್ಥಾನದಲ್ಲಿದ್ದು ಇತರರು 78 ಕ್ಷೇತ್ರಗಳಲ್ಲಿ ಜಯಗಳಿಸಿದ್ದಾರೆ.

Under the leadership of President @nalinkateel & CM @BSYBJP, BJP continues its victory march in Urban local body Elections.

Sincerely thank Voters for reposing their faith in us by giving 44 seats out of 60 in Mangaluru Corporation.

Hearty Congratulations to our Candidates. pic.twitter.com/nhHyRBQGiZ

— BJP Karnataka (@BJP4Karnataka) November 14, 2019

ಈ ವಿಚಾರವಾಗಿ ಟ್ವೀಟ್ ಮಾಡಿರುವ ಕರ್ನಾಟಕ ರಾಜ್ಯ ಕಾಂಗ್ರೆಸ್, ರಾಜ್ಯ ‘ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ’ಯಲ್ಲಿ ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ ನಗರಗಳ ಗೆಲುವಿನೊಂದಿಗೆ, ಒಟ್ಟು 418 ರಲ್ಲಿ, 151 ಸ್ಥಾನಗಳಲ್ಲಿ ಗೆದ್ದು ಕಾಂಗ್ರೆಸ್ ಅಗ್ರ ಸ್ಥಾನ ಪಡೆದಿದೆ. ಗೆಲುವು ಸಾಧಿಸಿದ ಪಕ್ಷದ ಎಲ್ಲಾ ಅಭ್ಯರ್ಥಿಗಳಿಗೆ ಅಭಿನಂದನೆಗಳು. ಗೆಲುವಿಗೆ ಕಾರಣಕರ್ತರಾದ ಕಾರ್ಯಕರ್ತರಿಗೂ, ಮತದಾರರಿಗೂ ಧನ್ಯವಾದಗಳು ಎಂದು ಬರೆದುಕೊಂಡಿದೆ.

ಮಂಗಳೂರು ಪಾಲಿಕೆ ಬಿಜೆಪಿ ತೆಕ್ಕೆಗೆ ಬಿದ್ದಿದ್ದು ಒಟ್ಟು 60 ಸ್ಥಾನಗಳಲ್ಲಿ ಕಾಂಗ್ರೆಸ್ 14 ರಲ್ಲಿ ಗೆದ್ದಿದ್ದರೆ, ಇತರರು 2 ಸ್ಥಾನದಲ್ಲಿ ಗೆದ್ದಿದ್ದಾರೆ. ಬಿಜೆಪಿ 44 ರಲ್ಲಿ ಗೆಲ್ಲುವ ಮೂಲಕ ಆಡಳಿತರೂಢ ಕಾಂಗ್ರೆಸ್ ಸೋಲಿಸಿ ನಗರಪಾಲಿಕೆಯನ್ನು ಗೆದ್ದುಕೊಂಡಿದೆ.

ದಾವಣಗೆರೆ ಪಾಲಿಕೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯ ಸಾಧಿಸಿದ್ದು, ಒಟ್ಟು 45 ಸ್ಥಾನಗಳಲ್ಲಿ ಬಿಜೆಪಿ 17, ಜೆಡಿಎಸ್ 1 ಮತ್ತು ಇತರರು 5 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ ಒಟ್ಟು 22 ಸ್ಥಾನಗಳನ್ನು ಗೆದ್ದುಕೊಂಡಿರುವ ಕಾಂಗ್ರೆಸ್ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದರೂ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ.

9 ಜಿಲ್ಲೆಯ 14 ಸ್ಥಳೀಯ ಸಂಸ್ಥೆಗಳ 418 ಸ್ಥಾನಗಳ ಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು, ಈ ಪೈಕಿ 151 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಕಾಂಗ್ರೆಸ್ ಅತಿ ಹೆಚ್ಚು ಸ್ಥಾನ ಗೆದ್ದ ಪಕ್ಷವಾಗಿ ಹೊರಹೊಮ್ಮಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹಿಂದೆ ಕೂಡ ಕಾಂಗ್ರೆಸ್ ಪಕ್ಷ ನಂ.1 ಆಗಿತ್ತು, ಈಗಲೂ ನಂ.1 ಆಗಿಯೇ ಇದೆ. 1/3#LocalBodyElection pic.twitter.com/XNz2NC6oPk

— Siddaramaiah (@siddaramaiah) November 14, 2019

ಕನಕಪುರ ನಗರಸಭೆಯಲ್ಲಿ ಒಟ್ಟು 31 ವಾರ್ಡ್‍ಗಳಲ್ಲಿ ಚುನಾವಣೆ ನಡೆದಿದ್ದು, ಬಿಜೆಪಿ 1 ಮತ್ತು ಜೆಡಿಎಸ್ ನಾಲ್ಕು ಸ್ಥಾನಗಳಲ್ಲಿ ಗೆಲುವು ಸಾಧಿಸಿವೆ. 7 ವಾರ್ಡ್‍ಗಳಲ್ಲಿ ಅವಿರೋಧ ಆಯ್ಕೆಯೊಂದಿಗೆ ಒಟ್ಟು 26 ಸ್ಥಾನಗಳಲ್ಲಿ ಭರ್ಜರಿ ಜಯ ಸಾಧಿಸಿರುವ ಕಾಂಗ್ರೆಸ್ ಕನಕಪುರ ನಗರಸಭೆಯಲ್ಲಿ ಗೆಲುವಿನ ನೆಗೆ ಬೀರಿದೆ.

ಕೋಲಾರ ನಗರ ಸಭೆ ಚುನಾವಣೆಯಲ್ಲಿ ಅತಂತ್ರ ಪರಿಸ್ಥಿತಿ ಎದುರಾಗಿದೆ. ಚುನಾವಣೆ ನಡೆದ ಒಟ್ಟು 35 ವಾರ್ಡ್ ಗಳಲ್ಲಿ, ಕಾಂಗ್ರೆಸ್ 12, ಬಿಜೆಪಿ 3 ಮತ್ತು ಜೆಡಿಎಸ್ 8 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, ಇತರರು 12 ವಾರ್ಡ್ ನಲ್ಲಿ ಗೆದ್ದಿದ್ದಾರೆ. ಬಹುಮತ ಪಡೆಯಲು ಯಾರು 13 ಸ್ಥಾನ ಗೆಲ್ಲದ ಪರಿಣಾಮ ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿದೆ.

ಮುಳಬಾಗಿಲು ನಗರಸಭೆಯಲ್ಲೂ ಕೋಲಾರದ ರೀತಿಯಲ್ಲೇ ಅತಂತ್ರ ಪರಿಸ್ಥಿತಿ ಎದುರಾಗಿದ್ದು, ಒಟ್ಟು 31 ವಾರ್ಡ್ ನಲ್ಲಿ ಚುನಾವಣೆ ನಡೆದಿದೆ. ಇದರಲ್ಲಿ ಕಾಂಗ್ರೆಸ್ 7, ಬಿಜೆಪಿ 2, ಜೆಡಿಎಸ್ 10 ಮತ್ತು ಇತರರು 12 ಸ್ಥಾನದಲ್ಲಿ ಗೆಲುವು ಸಾಧಿಸಿದ್ದಾರೆ. ಬಹುಮತಕ್ಕೆ ಬೇಕಾದ 16 ಸ್ಥಾನ ಯಾರೂ ಗೆದ್ದಿಲ್ಲದ ಕಾರಣ ಅತಂತ್ರವಾಗಿದೆ.

ಚುನಾವಣೆ ನಡೆದ ಹೆಚ್ಚಿನ ಸ್ಥಾನಗಳು ಪಟ್ಟಣ ಪ್ರದೇಶಕ್ಕೆ ಒಳಪಟ್ಟಿದ್ದರೂ ಕೂಡ ನಾವು ಬಿಜೆಪಿಗಿಂತ 26 ಅಧಿಕ ಸ್ಥಾನಗಳನ್ನು ಜಯಗಳಿಸಿದ್ದೇವೆ. ನಮ್ಮ ಪಕ್ಷ ನಗರ ಪ್ರದೇಶಗಳಲ್ಲಿ ಹೆಚ್ಚು ಬಲಿಷ್ಠವಾಗಿದೆ ಎಂದು ಇದುವರೆಗೂ ಬಿಜೆಪಿ ಏನು ಹೇಳುತ್ತಿತ್ತು, ಅದು ಈ ಫಲಿತಾಂಶದಿಂದ ಸುಳ್ಳಾಗಿದೆ. 2/3 #LocalBodyElection

— Siddaramaiah (@siddaramaiah) November 14, 2019

ಕೆಜಿಎಫ್ ನಗರಸಭೆಯಲ್ಲೂ ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿದೆ. ಚುನಾವಣೆ ನಡೆದ ಒಟ್ಟು 35 ವಾರ್ಡ್ ಗಳಲ್ಲಿ, ಕಾಂಗ್ರೆಸ್ 13, ಬಿಜೆಪಿ 3, ಜೆಡಿಎಸ್ 2 ಮತ್ತು ಇತರರು 17 ಸ್ಥಾನಗಳಲ್ಲಿ ಗೆಲವು ಸಾಧಿಸಿದ್ದಾರೆ. ಬಹುಮತಕ್ಕೆ 18 ಸ್ಥಾನಗಳ ಅವಶ್ಯಕತೆ ಇದ್ದು, ಈ ನಗರಸಭೆ ಫಲಿತಾಂಶ ಕೂಡ ಅತಂತ್ರವಾಗಿದೆ.

ಗೌರಿಬಿದನೂರು ನಗರಸಭೆಯಲ್ಲೂ ಅತಂತ್ರ ಫಲಿತಾಂಶ ಹೊರಬಂದಿದೆ. ಒಟ್ಟು 31 ವಾರ್ಡ್ ಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 15, ಬಿಜೆಪಿ 3, ಜೆಡಿಎಸ್ 7 ಮತ್ತು ಇತರರು 6 ಸ್ಥಾನಗಳಲ್ಲಿ ಗೆದ್ದಿದ್ದು, ಬಹುಮತಕ್ಕಾಗಿ 16 ಸ್ಥಾನಗಳ ಅವಶ್ಯಕತೆ ಇದ್ದು, ಕಾಂಗ್ರೆಸ್ ಸನಿಹದಲ್ಲಿ ಇದೆ.

ಚಿಂತಾಮಣಿ ನಗರಸಭೆಯಲ್ಲಿ ಅತಂತ್ರ ಫಲಿತಾಂಶ ಬಂದಿದ್ದು, ಚುನಾವಣೆ ನಡೆದ 31 ವಾರ್ಡ್ ಗಳಲ್ಲಿ ಕಾಂಗ್ರೆಸ್ 1, ಬಿಜೆಪಿ 0, ಜೆಡಿಎಸ್ 14, ಮಾಜಿ ಶಾಸಕ ಸುಧಾಕರ್ ನೇತೃತ್ವದ ಭಾರತೀಯ ಪ್ರಜಾಪಕ್ಷ 14 ಮತ್ತು ಇತರೆ 2 ಗೆದ್ದಿವೆ. ಬಹುಮತಕ್ಕೆ 16 ಸ್ಥಾನದ ಅವಶ್ಯಕತೆ ಇದ್ದು, ಇಲ್ಲೂ ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿದೆ.

ಮಾಗಡಿ ಪುರಸಭೆ ಜೆಡಿಎಸ್ ತೆಕ್ಕೆಗೆ ಬಿದ್ದಿದ್ದು, ಒಟ್ಟು 23 ವಾರ್ಡ್ ಗಳಲ್ಲಿ ಚುನಾವಣೆ ನಡೆದಿದದೆ. ಇದರಲ್ಲಿ ಕಾಂಗ್ರೆಸ್ 10, ಬಿಜೆಪಿ 1, ಜೆಡಿಎಸ್ 12 ಗೆದ್ದಿದ್ದು, 12 ಸ್ಥಾನದಲ್ಲಿ ಗೆದ್ದ ಜೆಡಿಎಸ್ ಬಹುಮತ ಪಡೆದಿದೆ.

ಬೀರೂರು ನಗರಸಭೆಯೂ ಕೂಡ ಅತಂತ್ರ ಪರಿಸ್ಥಿತಿ ಎದುರಾಗಿದ್ದು, ಒಟ್ಟು 23 ವಾರ್ಡ್ ಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 9, ಬಿಜೆಪಿ 10, ಜೆಡಿಎಸ್ 2 ಮತ್ತು ಇತರರು 2 ಸ್ಥಾನದಲ್ಲಿ ಗೆದ್ದಿದ್ದಾರೆ. ಬಹುಮತಕ್ಕೆ ಬೇಕಾದ 12 ಸ್ಥಾನಗಳನ್ನು ಯಾವ ಪಕ್ಷವೂ ಗೆಲ್ಲದ ಕಾರಣ ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿದೆ.

ಕಂಪ್ಲಿ ನಗರಸಭೆ ಬಿಜೆಪಿ ತೆಕ್ಕೆಗೆ ಬಿದ್ದಿದ್ದು, ಒಟ್ಟು ಚುನಾವಣೆ ನಡೆದ 23 ವಾರ್ಡ್ ಗಳಲ್ಲಿ ಕಾಂಗ್ರೆಸ್ 10, ಬಿಜೆಪಿ 13 ಸ್ಥಾನದಲ್ಲಿ ಗೆದ್ದಿವೆ. 13 ಸ್ಥಾನಗಳಲ್ಲಿ ಗೆದ್ದು ಬಹುಮತ ಪಡೆದ ಬಿಜೆಪಿ ಪಕ್ಷ ಬಹುಮತ ಪಡೆದಿದೆ.

14 ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ನಮ್ಮ‌ ಪಕ್ಷಕ್ಕೆ ಜನತೆ ಬೆಂಬಲ ನೀಡಿ, ಹೆಚ್ಚು ಸ್ಥಾನಗಳಲ್ಲಿ ಜಯಗಳಿಸುವಂತೆ ಆಶೀರ್ವದಿಸಿದ್ದಾರೆ. ಈ ಎಲ್ಲ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಮತದಾರರಿಗೆ ಪಕ್ಷದ ಪರವಾಗಿ ಕೃತಜ್ಞತೆ ಸಲ್ಲಿಸುತ್ತೇನೆ. 3/3 #LocalBodyElection

— Siddaramaiah (@siddaramaiah) November 14, 2019

ಕುಂದಗೋಳ ಪಟ್ಟಣ ಪಂಚಾಯಿತಿ ಬಿಜೆಪಿ ತೆಕ್ಕೆಗೆ ಹೋಗಿದ್ದು, ಒಟ್ಟು 19 ವಾರ್ಡ್ ಗಳಲ್ಲಿ ಚುನಾವಣೆ ನಡೆದಿದ್ದು, ಕಾಂಗ್ರೆಸ್ 5, ಬಿಜೆಪಿ 12 ಮತ್ತು ಇತರರು 2 ಸ್ಥಾನ ಪಡೆದುಕೊಂಡಿದ್ದಾರೆ. 12 ಸ್ಥಾನಗಳಲ್ಲಿ ಗೆಲುವು ಸಾಧಿಸಿರುವ ಬಿಜೆಪಿ ಬಹುಮತ ಪಡೆದಿದೆ.

ಜೋಗ್ ಕಾರ್ಗಲ್ ನಗರಸಭೆ ಬಿಜೆಪಿ ಬಹುಮತ ಪಡೆದಿದ್ದು, ಚುನಾವಣೆ ನಡೆದ ಒಟ್ಟು 11 ವಾರ್ಡ್ ಗಳಲ್ಲಿ ಕಾಂಗ್ರೆಸ್ 1, ಬಿಜೆಪಿ 9 ಮತ್ತು ಇತರರು 1 ಸ್ಥಾನದಲ್ಲಿ ಗೆದ್ದಿದ್ದಾರೆ. 9 ಸ್ಥಾನಗಳಲ್ಲಿ ಗೆದ್ದ ಬಿಜೆಪಿ ಬಹುಮತ ಸಾಧಿಸಿದೆ.

ಕೂಡ್ಲಿಗಿ ನಗರಸಭೆ ಅತಂತ್ರ ಫಲಿತಾಂಶ ಹೊರಬಿದ್ದಿದ್ದು, ಒಟ್ಟು 20 ವಾರ್ಡ್ ಗಳಲ್ಲಿ ಚುನಾವಣೆ ನಡೆದಿದ್ದು, ಕಾಂಗ್ರೆಸ್ 6, ಬಿಜೆಪಿ 7, ಜೆಡಿಎಸ್ 04 ಮತ್ತು ಇತರರು 3 ಸ್ಥಾನದಲ್ಲಿ ಗೆದ್ದಿದ್ದಾರೆ. ಬಹುಮತ ಸಾಬೀತು ಪಡಿಸಲು ಒಟ್ಟು 11 ಸ್ಥಾನದ ಅವಶ್ಯಕತೆ ಇದೆ.

TAGGED:bjpcongresselection resultsjdsmunicipalityPublic TVಕಾಂಗ್ರೆಸ್ಚುನಾವಣಾ ಫಲಿತಾಂಶಜೆಡಿಎಸ್ನಗರಸಭೆಪಬ್ಲಿಕ್ ಟಿವಿಬಿಜೆಪಿ
Share This Article
Facebook Whatsapp Whatsapp Telegram

Cinema news

Arjun Janya
ಅರ್ಜುನ್ ಜನ್ಯ ಸಂಯೋಜನೆಯಲ್ಲಿ ʻಮಹಾಗುರು ಮಹಾದೇವʼ ಆಲ್ಬಂ
Cinema Latest Sandalwood
Sanvi Sudeep
ಅರಿಶಿಣ ಶಾಸ್ತ್ರದಲ್ಲಿ ಸುದೀಪ್ ಪುತ್ರಿ – ಫೋಟೋ ವೈರಲ್
Cinema Latest Sandalwood Top Stories
Ratha Saptami Jeevan Moulya
ರಥಸಪ್ತಮಿ: ವಿಭಿನ್ನ ಧಾರಾವಾಹಿಗೆ ಸಾಕ್ಷಿಯಾದ ಉದಯ ಟಿವಿ
Cinema Latest TV Shows
Marali Manasagide Teaser Release
ಮರಳಿ ಮನಸಾಗಿದೆ ಚಿತ್ರದ ಟೀಸರ್ ರಿಲೀಸ್
Cinema Latest Sandalwood Top Stories

You Might Also Like

iqbal hussain
Districts

ಇಡ್ಲಿ, ನಾಟಿಕೋಳಿ ತಿಂದಮೇಲೆ ಎಲ್ಲವೂ ಮುಗಿದಿದೆ, ಇನ್ನು ನಮ್ಮಲ್ಲಿ ಯಾವುದೇ ಗೊಂದಲ ಇಲ್ಲ: ಇಕ್ಬಾಲ್ ಹುಸೇನ್

Public TV
By Public TV
3 minutes ago
Nikhil Kumaraswamy
Bengaluru City

ಬ್ರೇಕ್‌ಫಾಸ್ಟ್ ಮೀಟಿಂಗ್‌ಗೆ ಇಡ್ಲಿ, ನಾಟಿ ಕೋಳಿ ಸಾರು – ಡಿನ್ನರ್‌ಗೆ ಬೆಳ್ಳುಳ್ಳಿ ಕಬಾಬ್ ಇರುತ್ತೇನೋ: ನಿಖಿಲ್ ಲೇವಡಿ

Public TV
By Public TV
8 minutes ago
Sharanprakash Patil Slovakia 1
Latest

ಸ್ಲೋವಾಕಿಯಾದಲ್ಲಿರುವ ಕರ್ನಾಟಕದ ಉದ್ಯೋಗಿಗಳೊಂದಿಗೆ ಡಾ. ಶರಣಪ್ರಕಾಶ್‌ ಪಾಟೀಲ್‌ ಸಂವಾದ

Public TV
By Public TV
17 minutes ago
Dharwad
Dharwad

ಧಾರವಾಡ | 3 ಕೋಟಿ ರೂಪಾಯಿ ಮೌಲ್ಯದ ಭೂಮಿಯನ್ನ ಸ್ಮಶಾನಕ್ಕೆ ದಾನ ಕೊಟ್ಟ ಮಾಲೀಕ

Public TV
By Public TV
36 minutes ago
Prajwal Revanna 2
Court

ಪ್ರಜ್ವಲ್‌ಗೆ ಮತ್ತೆ ಶಾಕ್ – ಜೀವಾವಧಿ ಶಿಕ್ಷೆ ಅಮಾನತುಗೊಳಿಸಿ ಜಾಮೀನು ನೀಡುವಂತೆ ಸಲ್ಲಿಸಿದ್ದ ಅರ್ಜಿ ವಜಾ

Public TV
By Public TV
41 minutes ago
Chitradurga Man Dies From Electric Shock
Chitradurga

Chitradurga| ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸಾವು

Public TV
By Public TV
47 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?