ಬೆಳಗಾವಿ: ನಕಲಿ ದಾಖಲೆ ಸೃಷ್ಟಿಸಿ ಜಮೀನು ಕಬಳಿಸಿದ ಆರೋಪ ಎದುರಿಸುತ್ತಿರುವ ಬಿಜೆಪಿ ಸರ್ಕಾರದ ಸಚಿವರೊಬ್ಬರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಕಲಾಪಕ್ಕೆ ಅಡ್ಡಿಪಡಿಸಿದ ವಿಧಾನ ಪರಿಷತ್ನ 15 ಮಂದಿ ಕಾಂಗ್ರೆಸ್ ಸದಸ್ಯರನ್ನು ಸಭಾಪತಿ ಅಮಾನತುಗೊಳಿಸಿದ್ದಾರೆ.
- Advertisement 2
ಎಸ್.ಆರ್.ಪಾಟೀಲ್, ಎಂ.ನಾರಾಯಣಸ್ವಾಮಿ, ಹರಿಪ್ರಸಾದ್, ಪ್ರತಾಪ್ಚಂದ್ರ ಶೆಟ್ಟಿ, ಸಿಎಂ ಇಬ್ರಾಹಿಂ, ನಜೀರ್ ಅಹಮದ್, ಆರ್ಬಿ ತಿಮ್ಮಾಪುರ, ಬಸವರಾಜ್ ಪಾಟೀಲ್ ಇಟಗಿ, ಯುಬಿ ವೆಂಕಟೇಶ್, ಅರವಿಂದಕುಮಾರ್, ಗೋಪಾಲಸ್ವಾಮಿ, ಸಿಎಂ ಲಿಂಗಪ್ಪ, ವೀಣಾ ಅಚ್ಚಯ್ಯ, ಪಿಆರ್ ರಮೇಶ್, ಹರೀಶ್ಕುಮಾರ್ ಅವರನ್ನು ಸಭಾಪತಿ ತೇಜಸ್ವಿನಿ ರಮೇಶ್ ಅಮಾನತುಗೊಳಿಸಿದ್ದಾರೆ. ಇದನ್ನೂ ಓದಿ: ವೆಸ್ಟ್ ಬಾಡಿ ಯಾರು ಅಂತ ಇಡೀ ರಾಜ್ಯಕ್ಕೆ ತಿಳಿದಿದೆ: ಜಾರಕಿಹೊಳಿಗೆ ತಿವಿದ ಸಿದ್ದರಾಮಯ್ಯ
- Advertisement 3
ಜಮೀನು ಕಬಳಿಕೆ ಆರೋಪ ಪ್ರಕರಣದ ವಿಚಾರ ಹೈಕೋರ್ಟ್ನಲ್ಲಿದೆ. ಕೋರ್ಟ್ನಲ್ಲಿ ಪ್ರಕರಣ ಇರುವ ಕಾರಣ ಚರ್ಚೆ ಬೇಡ ಎಂದು ಸಭಾಪತಿ ಕಲಾಪದಲ್ಲಿ ಚರ್ಚೆಗೆ ಅವಕಾಶ ನೀಡಲಿಲ್ಲ. ಈ ವೇಳೆ ಚರ್ಚೆಗೆ ಅವಕಾಶ ನೀಡುವಂತೆ ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರು ಪಟ್ಟು ಹಿಡಿದರು. ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಸದನದ ಬಾವಿಗಿಳಿದು ಧರಣಿ ನಡೆಸಿದರು.
- Advertisement 4
ಕಾನೂನು ಸಚಿವರು ನಿಯಮ ಹೇಳಿದ್ದಾರೆ. ಹೀಗಾಗಿ ನಾನು ನಿಲುವಳಿ ಸೂಚನೆಗೆ ಅವಕಾಶ ನೀಡಿಲ್ಲ. ಈಗ ಆ ಚರ್ಚೆ ಬೇಡ ಎಂದು ಸಭಾಪತಿ ಹೊರಟ್ಟಿ ತಿಳಿಸಿದರು. ಈ ವೇಳೆ ಸಚಿವರಾದ ಸೋಮಣ್ಣ, ಮಾಧುಸ್ವಾಮಿ ಅವರು ಕಾಂಗ್ರೆಸ್ ಸದಸ್ಯರ ವಿರುದ್ಧ ಹರಿಹಾಯ್ದರು. ಸಭಾಪತಿ ರೂಲಿಂಗ್ ಮಾಡಿದ ಮೇಲೆ ಯಾರೂ ಒಳಗೆ ಇರುವ ಹಾಗಿಲ್ಲ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಪೊಲೀಸರಿಗೆ ಫ್ರೀ ಹ್ಯಾಂಡ್, ಮಂಗಳೂರಲ್ಲಿ ಕಾನೂನು ಸುವ್ಯವಸ್ಥೆ ಭಂಗ ಬಂದ್ರೆ ಕ್ರಮ: ಆರಗ ಜ್ಞಾನೇಂದ್ರ
ಧರಣಿ ನಿಲ್ಲಿಸದ ಕಾಂಗ್ರೆಸ್ ಸದಸ್ಯರನ್ನು ಅಮಾನತುಗೊಳಿಸಿ ಸಭಾಪತಿ ಹೊರಟ್ಟಿ ಆದೇಶ ಹೊರಡಿಸಿದರು. ಅಮಾನತುಗೊಳಿಸಿದರೂ ಕಾಂಗ್ರೆಸ್ ಸದಸ್ಯರು ಸದನದಲ್ಲೇ ಧರಣಿ ಮುಂದುವರಿಸಿದರು. ಗಲಾಟೆ ಹೆಚ್ಚಾದ ಕಾರಣ ಕಲಾಪವನ್ನು ನಾಳೆಗೆ ಮುಂದೂಡಲಾಯಿತು.