ಯಾರಿಗೆ ಕೊರೊನಾ ಬಂದ್ರೂ ಸರವಣಗೆ ಬರಲ್ಲ: ಹೊರಟ್ಟಿ

Public TV
1 Min Read
Sharavana basavaraj horatti Main

– ಸರವಣ ಅವ್ರ ಆರೋಗ್ಯ ತಪಾಸಣೆ ಆಗ್ಲೇ ಬೇಕು

ಬೆಂಗಳೂರು: ಕಲಾಪಕ್ಕೆ ಮಂಗಳವಾರ ಮಾಸ್ಕ್ ಹಾಕಿಕೊಂಡು ಬಂದ ಉದ್ದೇಶವನ್ನು ವಿಧಾನ ಪರಿಷತ್ ಸದಸ್ಯ ಸರವಣ ರಿವೀಲ್ ಮಾಡಿದ್ದಾರೆ.

ಕಲಾಪದಲ್ಲಿ ಮಾತನಾಡಿದ ಅವರು, ಸರ್ಕಾರದ ಗಮನ ಸೆಳೆಯುವ ಉದ್ದೇಶದಿಂದ ನಿನ್ನೆ ಮಾಸ್ಕ್ ಹಾಕಿಕೊಂಡು ಕಲಾಪಕ್ಕೆ ಬಂದಿದ್ದೆ. ಆದರೆ ಕೆಲವರು ನಿಮಗೆ ಕೊರೊನಾ ಬಂದಿದೆಯಾ ಅಂತ ವಿಧಾನ ಪರಿಷತ್‍ನ ಕೆಲ ಸದಸ್ಯರು ರೇಗಿಸಿದರು ಎಂದು ಹೇಳಿದರು. ಆಗ ಬಸವರಾಜ ಹೊರಟ್ಟಿ ಅವರು, ಯಾರಿಗೆ ಕೊರೊನಾ ಬಂದರೂ ಸರವಣಗೆ ಬರಲ್ಲ ಬಿಡಿ ಎಂದು ಗೇಲಿ ಮಾಡಿದರು.

Sharavana A

ಈ ಮಧ್ಯೆ ಧ್ವನಿಗೂಡಿಸಿದ ತೇಜಸ್ವಿನಿ ರಮೇಶ್, ಸರವಣ ಅವರ ಆರೋಗ್ಯ ತಪಾಸಣೆ ಆಗಲೇ ಬೇಕು. ಅನುಮಾನ ನಿವಾರಣೆಯಾಗಲು ತಪಾಸಣೆ ಅಗತ್ಯ ಎಂದು ಹೇಳಿದರು. ಆಗ ಸರವಣ, ನಾನು ಆರೋಗ್ಯವಾಗಿದ್ದೇನೆ. ನೀವು ಕುಳಿತುಕೊಳ್ಳಿ ಎಂದರು.

ರಾಜ್ಯದ ಜನರು ಕೊರೊನಾ ಬಗ್ಗೆ ಆತಂಕದಲ್ಲಿ ಇದ್ದಾರೆ. ಈ ನಿಟ್ಟಿನಲ್ಲಿ ಸರ್ಕಾರ ಯಾವ ರೀತಿ ಕ್ರಮ ಕೈಗೊಂಡಿದೆ ಎನ್ನುವುದನ್ನು ಚರ್ಚಿಸಲು ಮಾಸ್ಕ್ ಹಾಕಿಕೊಂಡು ಬಂದಿದ್ದೆ. ಆದರೆ ಸದನವನ್ನು ಗಲಾಟೆಗೆ ತಳ್ಳಿದ್ರಿ ಎಂದು ಹೇಳಿದರು.

Basavaraj Horatti A

ಇದಕ್ಕೂ ಮುನ್ನ ಕೃಷಿ ಸಚಿವ ಬಿ.ಸಿ.ಪಾಟೀಲ್, ಕೊರೊನಾ ವೈರಸ್ ವಿವಿಧ ದೇಶಗಳಿಗೆ ಹರಡಿ ಆತಂಕ ಹೆಚ್ಚಿಸಿದೆ. ಅದು ವಿರೋಧ ಪಕ್ಷ, ಆಡಳಿತ ಪಕ್ಷ ಎಂದು ಭೇದಭಾವ ಮಾಡುವುದಿಲ್ಲ. ನಿಮಗೆ ಸ್ವಲ್ಪ ಜಾಸ್ತಿ ಇದೆ ಎಂದು ವಿಪಕ್ಷ ನಾಯಕ ಕಾಲೆಳೆದಿದ್ದರು.

ಈ ಮಧ್ಯೆ ಎದ್ದು ನಿಂತ ಸಿ.ಸಿ.ಪಾಟೀಲ್ ಅವರು, ನಿನ್ನೆ ಪ್ರಭಾಕರ್ ಕೋರೆ ಅವರು ಸಿಕ್ಕಿದ್ರು. ಅವರಿಗೆ ಶೇಕ್‍ಹ್ಯಾಂಡ್ ಮಾಡೋದಕ್ಕೆ ಹೋದ್ರೆ ಅವರು, ಬೇಡ ಬೇಡ ಎಂದು ಹೋಗಿ ಬಿಟ್ಟರು. ಅದಕ್ಕೆ ನಾನು, ಯಾಕ್ರಿ ಎಂದು ಪ್ರಶ್ನಿಸಿದೆ. ಆಗ ಕೋರೆ, ಕೊರೊನಾ ಬಂದ್ರೆ ಏನ್ ಮಾಡ್ಲಿ ಅಂತ ಹೇಳಿದರು. ಹೀಗಾಗಿ ನಿಮಗೆ ಕೊರೊನಾ ಆಂತಕ ಹೆಚ್ಚಾಗಿದೆ ಎಂದು ಬಿ.ಸಿ.ಪಾಟೀಲ್ ಅವರಿಗೆ ಟಾಂಗ್ ಕೊಟ್ಟಿದ್ದರು.

Share This Article
Leave a Comment

Leave a Reply

Your email address will not be published. Required fields are marked *