– ಚುನಾವಣೆ ಆಯೋಗದಿಂದಲೂ ಅನ್ಯಾಯ
– ಕುಮಾರಸ್ವಾಮಿ ಅವರೂ ಭಯೋತ್ಪಾದಕರ ಒಂದು ಭಾಗವೇ?
ನವದೆಹಲಿ: ಚುನಾವಣೆಗಳಲ್ಲಿ ಮತಗಳ್ಳತನ (Vote Theft) ನಡೆಯುತ್ತಿರುವ ಬಗ್ಗೆ ಮೊದಲು ಪತ್ತೆ ಹಚ್ಚಿದ್ದೇ ಕರ್ನಾಟಕದಲ್ಲಿ. ಈಗ ಮಹಾರಾಷ್ಟ್ರ, ಹರಿಯಾಣ, ಬಿಹಾರದಲ್ಲಿ ನಡೆಸಿರುವ ಅಕ್ರಮಗಳು ಬೆಳಕಿಗೆ ಬಂದಿವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ತಿಳಿಸಿದರು.
ದೆಹಲಿಯಲ್ಲಿ ಎಐಸಿಸಿ ನೂತನ ಕಟ್ಟಡ ಇಂದಿರಾ ಭವನದ ಆವರಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಾಂಕೇತಿಕವಾಗಿ ಸಹಿ ಸಂಗ್ರಹ ಅಭಿಯಾನದ ದಾಖಲೆಗಳನ್ನು ಹಸ್ತಾಂತರಿಸಿದ್ದೇವೆ. 100 ವರ್ಷಗಳ ಹಿಂದೆ ಮಹಾತ್ಮ ಗಾಂಧೀಜಿ ಅವರು ನಿಭಾಯಿಸಿದ್ದ ಜವಾಬ್ದಾರಿಯನ್ನು ಈಗ ನಮ್ಮ ರಾಜ್ಯದ ಮಲ್ಲಿಕಾರ್ಜುನ ಖರ್ಗೆ ಅವರು ನಿಭಾಯಿಸುತ್ತಿದ್ದಾರೆ. ಅವರ ಮಾರ್ಗದರ್ಶನದಲ್ಲಿ ಮತದಾನದ ಹಕ್ಕು ರಕ್ಷಣೆ ಹೋರಾಟ ಮಾಡಿದ್ದೇವೆ. ಒಬ್ಬರಿಗೆ ಒಂದು ಮತ ಎಂದು ನಾವು ಹೋರಾಟ ಮಾಡುತ್ತಿದ್ದೇವೆ. ಮತಗಳ್ಳತನವನ್ನು ಮೊದಲು ಪತ್ತೆಹಚ್ಚಿದ್ದೇ ನಮ್ಮ ರಾಜ್ಯದಲ್ಲಿ. ಎಐಸಿಸಿ ಸಂಶೋಧನಾ ವಿಭಾಗ, ನಮ್ಮ ಅಭ್ಯರ್ಥಿಯಾಗಿದ್ದ ಮನ್ಸೂರ್ ಅಲಿ ಖಾನ್, ಕೆಪಿಸಿಸಿ ತಂಡ ಸೇರಿ ಈ ಮತಗಳ್ಳತನ ಪತ್ತೆ ಮಾಡಿ ಎಐಸಿಸಿಗೆ ಮಾಹಿತಿ ನೀಡಿದೆವು ಎಂದು ವಿವರಿಸಿದರು. ಇದನ್ನೂ ಓದಿ: ವೋಟ್ ಚೋರಿ ವಿರುದ್ಧ ಅಭಿಯಾನ; ರಾಜ್ಯದ 1,12,41,000 ಸಹಿಗಳನ್ನ AICCಗೆ ಹಸ್ತಾಂತರಿಸಿದ ಡಿಕೆಶಿ
ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರು ಬೆಂಗಳೂರಿಗೆ ಆಗಮಿಸಿ ಫ್ರೀಡಂ ಪಾರ್ಕ್ನಿಂದ ಈ ಹೋರಾಟ ಆರಂಭಿಸಲಾಯಿತು. ನಂತರ ಮಹಾರಾಷ್ಟ್ರ, ಹರಿಯಾಣ ಚುನಾವಣಾ ಅಕ್ರಮ ಬಯಲಾಗಿ ಈ ಹೋರಾಟ ಬಿಹಾರದವರೆಗೂ ಹಬ್ಬಿತು. ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲ ಅವರ ನಿರ್ದೇಶನದ ಮೇರೆಗೆ ಈ ಅಭಿಯಾನ ಪೂರ್ಣಗೊಳಿಸಿದ್ದೇವೆ ಎಂದರು. ಇದನ್ನೂ ಓದಿ: ಜೆಡಿಎಸ್ ಕೋರ್ ಕಮಿಟಿ ಸ್ಥಾನದಿಂದ ಜಿಟಿ ದೇವೇಗೌಡ ಔಟ್ – ಎಂ.ಕೃಷ್ಣಾರೆಡ್ಡಿಗೆ ಮಣೆ ಹಾಕಿದ ಜೆಡಿಎಸ್ ವರಿಷ್ಠರು
ನಮ್ಮ ಕಾರ್ಯಕರ್ತರು, ಬ್ಲಾಕ್, ಜಿಲ್ಲಾಧ್ಯಕ್ಷರು ಹಾಗೂ ಪಕ್ಷದ ವಿವಿಧ ಘಟಕಗಳ ಪರಿಶ್ರಮದಿಂದ ಸಂಗ್ರಹಿಸಲಾದ ಸಹಿಗಳನ್ನು ಸಲ್ಲಿಕೆ ಮಾಡಿದ್ದೇವೆ. ನಾವು ನಮ್ಮ ಕರ್ತವ್ಯ ಮಾಡಿದ್ದು, ಮೊನ್ನೆಯಷ್ಟೇ ನಾನು ಹಾಗೂ ಸಿಎಂ ಈ ವಿಚಾರವಾಗಿ ಮಾಧ್ಯಮಗೋಷ್ಠಿ ನಡೆಸಿದ್ದೇವೆ. ನಮ್ಮ ಕಾರ್ಯಕರ್ತರು ಈ ಅಭಿಯಾನವನ್ನು ಇನ್ನೂ ಮುಂದುವರಿಸುತ್ತಿದ್ದು, ನಂತರ ಸಂಗ್ರಹಿಸುವ ಸಹಿ ದಾಖಲೆಗಳನ್ನು ಮುಂದಿನ ದಿನಗಳಲ್ಲಿ ಸಲ್ಲಿಕೆ ಮಾಡುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಪರಪ್ಪನ ಅಗ್ರಹಾರದಲ್ಲಿ ಕೈದಿಗಳ ಬಿಂದಾಸ್ ಲೈಫ್ – ಕಾಂಗ್ರೆಸ್ನ ಹೊಸ ಗ್ಯಾರಂಟಿ ಎಂದು ಕುಟುಕಿದ ಶೆಹಜಾದ್ ಪೂನಾವಾಲಾ
ಮತಗಳ್ಳತನ ಖಂಡಿತವಾಗಿ ಆಗಿದೆ. ಬಿಹಾರದಲ್ಲಿ ಎಸ್ಐಆರ್ ನಡೆದಾಗ ನ್ಯಾಯಾಲಯ ಮಧ್ಯಪ್ರವೇಶ ಮಾಡಿ ಏಕೆ ಸೂಚನೆ ನೀಡಿತು? ರಾಹುಲ್ ಗಾಂಧಿ ಅವರು ಇದರ ಬಗ್ಗೆ ಮೊದಲ ಪತ್ರಿಕಾಗೋಷ್ಠಿ ನಡೆಸಿದ ನಂತರ ಮಾಧ್ಯಮಗಳು ಬೆಂಗಳೂರಿಗೆ ಬಂದು ಉಲ್ಲೇಖಿತ ಮನೆಗಳ ಸಂಖ್ಯೆ ಸೇರಿದಂತೆ ಯಾವ, ಯಾವ ಕಡೆ ಅಕ್ರಮ ನಡೆದಿದೆ ಎಂದು ಫ್ಯಾಕ್ಟ್ ಚೆಕ್ ಮಾಡಿದವು. ಯಾವ ಸರ್ಕಾರವೂ ಅದರ ವೈಫಲ್ಯ ಒಪ್ಪಿಕೊಳ್ಳುವುದಿಲ್ಲ. ವಿರೋಧ ಪಕ್ಷದ ಕೆಲಸವೇ ವೈಫಲ್ಯಗಳನ್ನು ಕಂಡುಹಿಡಿದು ತಿಳಿಸುವುದು ಎಂದರು. ಇದನ್ನೂ ಓದಿ: ʻವೈಟ್ ಕಾಲರ್ ಉಗ್ರರ ಜಾಲʼದಲ್ಲಿ ವಿದ್ಯಾರ್ಥಿಗಳೂ ಭಾಗಿ – IED ತಯಾರಿಸುವ 2,900 Kg ಸ್ಫೋಟಕ ಪತ್ತೆ, 7 ಉಗ್ರರು ಅರೆಸ್ಟ್!
ಕುಮಾರಸ್ವಾಮಿ ಅವರೂ ಭಯೋತ್ಪಾದಕರ ಒಂದು ಭಾಗವೇ?
ವಿಧಾನಸೌಧದಲ್ಲಿ ಭಯೋತ್ಪಾದಕರಿದ್ದಾರೆ ಎನ್ನುವ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ಕುಮಾರಸ್ವಾಮಿ ಅವರೂ ಸಹ ಭಯೋತ್ಪಾದಕರ ಭಾಗವಾಗಿದ್ದಾರೆಯೇ? ಅವರೂ ಸಹ ವಿಧಾನಸೌಧದಲ್ಲಿ ಕುಳಿತಿರಲಿಲ್ಲವೇ? ಅವರಿಗೂ ಹಾಗೂ ಅವರ ಪಕ್ಷದವರಿಗೂ, ಅವರ ಆಡಳಿತಕ್ಕೂ ಇದು ಅನ್ವಯಿಸುತ್ತದೆ ಎಂದು ತಿರುಗೇಟು ನೀಡಿದರು. ಇದನ್ನೂ ಓದಿ: ಅಮೆರಿಕದ ಜನತೆಗೆ 1.77 ಲಕ್ಷ ರೂ. ಡಿವಿಡೆಂಡ್ : ಟ್ರಂಪ್ ಘೋಷಣೆ
ಸಂವಿಧಾನಿಕ ಸಂಸ್ಥೆಗಳ ದುರುಪಯೋಗ:
ಚುನಾವಣಾ ಆಯೋಗವು ಬಿಹಾರದ ಮತದಾರರಿಗೆ ಸರಿಯಾದ ನ್ಯಾಯ ಒದಗಿಸಿಲ್ಲ. ಬಿಜೆಪಿ ಸಂವಿಧಾನಿಕ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಂಡಿದೆ. ಯಾವುದು ಕಾಡದಿದ್ದರೂ ಆತ್ಮಸಾಕ್ಷಿ ಎನ್ನುವುದು ಇದ್ದೇ ಇರುತ್ತದೆ. ಅದು ಅಂತಿಮವಾಗಿ ಕೆಲಸ ಮಾಡಲಿದೆ ಎಂದು ಹೇಳಿದರು. ಇದನ್ನೂ ಓದಿ: ಬಿಹಾರ | 30 ವರ್ಷಗಳ ಹಿಂದೆ ನಿರ್ಮಿಸಿದ್ದ ಮನೆಯ ಛಾವಣಿ ಕುಸಿತ – ಒಂದೇ ಕುಟುಂಬದ ಐವರು ಸಾವು
ಮುಖ್ಯಮಂತ್ರಿ ಹುದ್ದೆ ಬದಲಾವಣೆ ಬಗೆಗಿನ ಊಹಾಪೋಹಗಳ ಬಗ್ಗೆ ಕೇಳಿದಾಗ, ನಾನು ರಾಜಕೀಯ ವಿಚಾರಗಳನ್ನು ಮಾತನಾಡುವುದಿಲ್ಲ. ನಾನು ಪ್ರಜಾಪ್ರಭುತ್ವ, ಮತದಾನದ ಹಕ್ಕು, ಸಂವಿಧಾನವನ್ನು ಉಳಿಸುವ ವಿಚಾರವಾಗಿ ಮಾತನಾಡುತ್ತೇನೆ ಎಂದು ಉತ್ತರಿಸಿದರು. ಇದನ್ನೂ ಓದಿ: ಸರ್ಕಾರ ನಿಗದಿ ಮಾಡಿದ ದರ ನೀಡಬೇಕು – ಕಬ್ಬು ಬೆಳೆಗಾರರಿಂದ ನಾಳೆ ಹೈವೇ ಬಂದ್ ಎಚ್ಚರಿಕೆ



