ರಾಜ್ಯಕ್ಕೆ ಮುಂಗಾರು ಪ್ರವೇಶ ಮಾಡಿದ್ದು, ರಾಜ್ಯಾದ್ಯಾಂತ ಮುಂದಿನ 3-4 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ದಕ್ಷಿಣ ಒಳನಾಡು, ಕರಾವಳಿಯ ಬಹುತೇಕ ಜಿಲ್ಲೆಗಳಲ್ಲಿ ಹೆಚ್ಚು ಮಳೆಯ ಸಾಧ್ಯತೆ ಇದೆ. ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೊಡಗು, ಹಾಸನ ಜಿಲ್ಲೆಗಳಿಗೆ ಭಾರೀ ಮಳೆ ಬರುವ ಸಾಧ್ಯತೆಯಿದೆ.
ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ. ಕಾರವಾರದಲ್ಲಿ ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದ್ದು, ಕನಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 30-20
ಮಂಗಳೂರು: 29-24
ಶಿವಮೊಗ್ಗ: 29-22
ಬೆಳಗಾವಿ: 32-21
ಮೈಸೂರು: 30-21
ಮಂಡ್ಯ: 32-21
ಕೊಡಗು: 24-18
ರಾಮನಗರ: 32-21
ಹಾಸನ: 27-19
ಚಾಮರಾಜನಗರ: 30-21
ಚಿಕ್ಕಬಳ್ಳಾಪುರ: 31-21
ಕೋಲಾರ: 32-21
ತುಮಕೂರು: 31-21
ಉಡುಪಿ: 30-25
ಕಾರವಾರ: 31-27
ಚಿಕ್ಕಮಗಳೂರು: 27-19
ದಾವಣಗೆರೆ: 33-22
ಚಿತ್ರದುರ್ಗ: 32-22
ಹಾವೇರಿ: 33-23
ಬಳ್ಳಾರಿ: 36-24
ಗದಗ: 34-22
ಕೊಪ್ಪಳ: 34-23
ರಾಯಚೂರು: 37-26
ಯಾದಗಿರಿ: 38-26
ವಿಜಯಪುರ: 36-24
ಬೀದರ್: 38-25
ಕಲಬುರಗಿ: 39-26
ಬಾಗಲಕೋಟೆ: 36-23