ಬಿಟ್ಟು ಬಿಟ್ಟು ಜಿಟಿ ಜಿಟಿಯಾಗಿ ಸುರಿಯುತ್ತಿರೋ ಮಳೆರಾಯ ಮಂಗಳವಾರ ಸಹ ಕಾಟ ಕೊಡುವ ಸಾಧ್ಯತೆ ಇದೆ. ಜೊತೆಗೆ ಕನಿಷ್ಠ ಉಷ್ಣಾಂಶ ಬೆಂಗಳೂರು ನಗರದಲ್ಲಿ ಇಳಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಇನ್ನೂ ಇದರ ಎಫೆಕ್ಟ್ ಬೆಂಗಳೂರು ಹೊರತುಪಡಿಸಿ ದಕ್ಷಿಣ ಒಳನಾಡು ಜಿಲ್ಲೆಗಳಿಗೂ ತಟ್ಟಲಿದೆ. ಚಾಮರಾಜನಗರ, ಮೈಸೂರು, ಕೊಡಗು, ರಾಮನಗರ ಜಿಲ್ಲೆಗಳಿಗಿಂದು ಆರೆಂಜ್ ಅಲರ್ಟ್ ನೀಡಲಾಗಿದೆ. ಕೆಲವೊಮ್ಮೆ ಈ ಜಿಲ್ಲೆಗಳ ಹಲವೆಡೆ ಗುಡುಗು, ಮಿಂಚು ಸಹಿತ ಜೋರು ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರು ನಗರ, ಗ್ರಾಮಾಂತರ, ಕೋಲಾರ, ಮಂಡ್ಯ, ಹಾಸನ, ಚಿಕ್ಕಮಗಳೂರು ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಒಳನಾಡಿನ ಮತ್ತು ಕರಾವಳಿ ಪ್ರದೇಶಗಳಲ್ಲೂ ಕೆಲವು ಕಡೆ ಸಾಧಾರಣ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 26-21
ಮಂಗಳೂರು: 28-24
ಶಿವಮೊಗ್ಗ: 28-21
ಬೆಳಗಾವಿ: 28-22
ಮೈಸೂರು: 28-22
ಮಂಡ್ಯ: 28-22
ಮಡಿಕೇರಿ: 25-20
ರಾಮನಗರ: 27-22
ಹಾಸನ: 25-21
ಚಾಮರಾಜನಗರ: 27-22
ಚಿಕ್ಕಬಳ್ಳಾಪುರ: 26-20
ಕೋಲಾರ: 27-21
ತುಮಕೂರು: 26-21
ಉಡುಪಿ: 28-24
ಕಾರವಾರ: 32-25
ಚಿಕ್ಕಮಗಳೂರು: 24-19
ದಾವಣಗೆರೆ: 29-22
ಹುಬ್ಬಳ್ಳಿ: 29-21
ಚಿತ್ರದುರ್ಗ: 27-21
ಹಾವೇರಿ: 29-22
ಬಳ್ಳಾರಿ: 28-22
ಗದಗ: 27-21
ಕೊಪ್ಪಳ: 28-22
ರಾಯಚೂರು: 31-23
ಯಾದಗಿರಿ: 31-23
ವಿಜಯಪುರ: 30-23
ಬೀದರ್: 29-22
ಕಲಬುರಗಿ: 31-23
ಬಾಗಲಕೋಟೆ: 30-23