ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಮುಂದಿನ ೨೪ ಗಂಟೆಗಳ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗಲಿದ್ದು, ಬೆಂಗಳೂರ ಮತ್ತು ಗ್ರಾಮಾಂತರದಲ್ಲೂ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಮತ್ತೊಂದೆಡೆ ಭಾರೀ ಮಳೆ ಹಿನ್ನೆಲೆ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಅಲರ್ಟ್ ಘೋಷಿಸಲಾಗಿದೆ.
ಮಲೆನಾಡು ಭಾಗಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಈಗಾಗಲೇ ಭಾರಿ ಮಳೆಯಾಗುತ್ತಿದ್ದು, ಉತ್ತರ ಒಳನಾಡು ಭಾಗಗಳಾ ಬಳ್ಳಾರಿ, ಬೆಳಗಾವಿ, ಬಾಗಲಕೋಟೆ, ಧಾರವಾಡ, ವಿಜಯಪುರ, ಕಲಬುರಗಿ, ಹಾವೇರಿ, ಗದಗ ಮತ್ತು ದಕ್ಷಿಣ ಒಳನಾಡು ಭಾಗಗಳಾದ ರಾಮನಗರ, ಚಾಮರಾಜನಗರ, ಹಾಸನ, ಮಂಡ್ಯ, ಮೈಸೂರು, ತುಮಕೂರು, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ದಾವಣಗೆರೆಯಲ್ಲೂ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ನೆಚ್ಚರಿಕೆ ನೀಡಲಾಗಿದೆ.
ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ರಾಯಚೂರಿನಲ್ಲಿ ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 24-19
ಮಂಗಳೂರು: 27-24
ಶಿವಮೊಗ್ಗ: 26-21
ಬೆಳಗಾವಿ: 26-21
ಮೈಸೂರು: 23-19
ಮಂಡ್ಯ: 25-21
ಕೊಡಗು: 21-17
ರಾಮನಗರ: 25-21
ಹಾಸನ: 23-19
ಚಾಮರಾಜನಗರ: 24-21
ಚಿಕ್ಕಬಳ್ಳಾಪುರ: 26-20
ಕೋಲಾರ: 26-21
ತುಮಕೂರು: 26-20
ಉಡುಪಿ: 27-24
ಚಿಕ್ಕಮಗಳೂರು: 23-18
ದಾವಣಗೆರೆ: 26-22
ಚಿತ್ರದುರ್ಗ: 26-21
ಹಾವೇರಿ: 27-22
ಬಳ್ಳಾರಿ: 29-23
ಗದಗ: 27-21
ಕೊಪ್ಪಳ: 27-22
ರಾಯಚೂರು: 30-23
ಯಾದಗಿರಿ: 29-23
ವಿಜಯಪುರ: 27-22
ಬೀದರ್: 27-22
ಕಲಬುರಗಿ: 29-23
ಬಾಗಲಕೋಟೆ: 28-23