ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆ ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಗಳಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇಂದು ಬೆಂಗಳೂರು ಸೇರಿದಂತೆ ಮಲೆನಾಡಿನ ಭಾಗಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಕರಾವಳಿ ಭಾಗಗಳಾದ ಉಡುಪಿ, ಮಂಗಳೂರು ಹಾಗೂ ಕಾರವಾರ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 23-19
ಮಂಗಳೂರು: 29-23
ಶಿವಮೊಗ್ಗ: 28-19
ಬೆಳಗಾವಿ: 28-17
ಮೈಸೂರು: 24-20
ಮಂಡ್ಯ: 24-20
ಮಡಿಕೇರಿ: 24-18
ರಾಮನಗರ: 24-20
ಹಾಸನ: 23-19
ಚಾಮರಾಜನಗರ: 24-21
ಚಿಕ್ಕಬಳ್ಳಾಪುರ: 23-19
ಕೋಲಾರ: 22-18
ತುಮಕೂರು: 24-19
ಉಡುಪಿ: 29-22
ಕಾರವಾರ: 30-22
ಚಿಕ್ಕಮಗಳೂರು: 23-18
ದಾವಣಗೆರೆ: 28-20
ಹುಬ್ಬಳ್ಳಿ: 29-18
ಚಿತ್ರದುರ್ಗ: 29-19
ಹಾವೇರಿ: 29-19
ಬಳ್ಳಾರಿ: 29-21
ಗದಗ: 28-18
ಕೊಪ್ಪಳ: 29-19
ರಾಯಚೂರು: 31-20
ಯಾದಗಿರಿ: 30-19
ವಿಜಯಪುರ: 29-21
ಬೀದರ್: 29-17
ಕಲಬುರಗಿ: 29-18
ಬಾಗಲಕೋಟೆ: 29-19