ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಮಳೆಯಾಗುತ್ತಿದೆ. ಇಂದು ಸಹ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇಂದು ಬೆಂಗಳೂರು ಸೇರಿದಂತೆ ಮಲೆನಾಡಿನ ಭಾಗಗಳಾದ ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ಮಡಿಕೇರಿ, ಮೈಸೂರು, ಮಂಡ್ಯ ಮುಂತಾದ ಕಡೆಗಳಲ್ಲಿ ಹಗುರ ಮಳೆಯಾಗಲಿದೆ ಎಂದು ಇಲಾಖೆ ವರದಿ ಮಾಡಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 24-21
ಮಂಗಳೂರು: 30-23
ಶಿವಮೊಗ್ಗ: 28-20
ಬೆಳಗಾವಿ: 28-19
ಮೈಸೂರು: 29-21
ಮಂಡ್ಯ: 28-21
ಮಡಿಕೇರಿ: 26-19
ರಾಮನಗರ: 27-21
ಹಾಸನ: 26-19
ಚಾಮರಾಜನಗರ: 28-21
ಚಿಕ್ಕಬಳ್ಳಾಪುರ: 26-20
ಕೋಲಾರ: 25-20
ತುಮಕೂರು: 27-20
ಉಡುಪಿ: 31-24
ಕಾರವಾರ: 31-23
ಚಿಕ್ಕಮಗಳೂರು: 24-18
ದಾವಣಗೆರೆ: 29-21
ಹುಬ್ಬಳ್ಳಿ: 28-19
ಚಿತ್ರದುರ್ಗ: 27-20
ಹಾವೇರಿ: 29-20
ಬಳ್ಳಾರಿ: 29-22
ಗದಗ: 28-19
ಕೊಪ್ಪಳ: 29-21
ರಾಯಚೂರು: 29-22
ಯಾದಗಿರಿ: 29-21
ವಿಜಯಪುರ: 29-21
ಬೀದರ್: 28-18
ಕಲಬುರಗಿ: 29-20
ಬಾಗಲಕೋಟೆ: 29-22