ರಾಜ್ಯದಲ್ಲಿ ಮಳೆ ಪ್ರಮಾಣ ನಿಧಾನವಾಗಿ ಇಳಿಕೆಯಾಗುತ್ತಿದೆ. ಕರಾವಳಿಗೆ ಇಂದಿನಿಂದ ಮೂರು ದಿನ ಆರೆಂಜ್ ಅಲರ್ಟ್ ಜಾರಿಯಾಗಲಿದೆ. ಭಾರೀ ಮಳೆಯಾಗುತ್ತಿದ್ದ ಹಿನ್ನೆಲೆಯಲ್ಲಿ ಕರಾವಳಿ ಭಾಗಕ್ಕೆ ರೆಡ್ ಅಲರ್ಟ್ ನೀಡಲಾಗಿತ್ತು. ಆದರೆ ಎರಡು ದಿನಗಳಿಂದ ಮಳೆ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಕರಾವಳಿ ಭಾಗಕ್ಕೆ ಆರೆಂಜ್ ಅಲರ್ಟ್ ನೀಡಿದೆ.
ಕರಾವಳಿಗೆ ಇಂದಿನಿಂದ ಮೂರು ದಿನ ಆರೆಂಜ್ ಅಲರ್ಟ್ ಇದ್ದರೆ ಕೊನೆಯ ಎರಡು ದಿನ ಯಲ್ಲೋ ಅಲರ್ಟ್ ಇರಲಿದೆ. ಇಂದು ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್, ಬೆಳಗಾವಿ, ಕಲಬುರಗಿ, ವಿಜಯಪುರ, ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಜಾರಿಯಾಗಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಹಾಸನ, ಜಿಲ್ಲೆಗಳಿಗೆ ಮಾತ್ರ ಯೆಲ್ಲೋ ಅಲರ್ಟ್ ನೀಡಲಾಗಿದೆ. ಉಳಿದಂತೆ ರಾಜ್ಯದ ಯಾವ ಜಿಲ್ಲೆಗಳಿಗೂ ಯಾವುದೇ ಅಲರ್ಟ್ ಇಲ್ಲ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ರಾವಳಿ ತೀರದಲ್ಲಿ ಬಿರುಗಾಳಿಯ ವೇಗವು ಪ್ರತಿ ಘಂಟೆಗೆ 45-55 ಕಿ.ಮೀ. ಇರಲಿದ್ದು, 65 ಕಿ.ಮೀ. ವರೆಗೂ ತಲುಪುವ ಸಾಧ್ಯತೆ ಇದೆ. ಮೀನುಗಾರರು ಈ ಅವಧಿಯಲ್ಲಿ ಸಮುದ್ರಕ್ಕೆ ತೆರಳದಂತೆ ಸೂಚಿಸಲಾಗಿದೆ.
ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ. ಯಾದಗಿರಿ ಮತ್ತು ರಾಯಚೂರಿನಲ್ಲಿ ಗರಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 26-20
ಮಂಗಳೂರು: 27-25
ಶಿವಮೊಗ್ಗ: 24-21
ಬೆಳಗಾವಿ: 23-21
ಮೈಸೂರು: 26-21
ಮಂಡ್ಯ: 27-21
ಕೊಡಗು: 20-17
ರಾಮನಗರ: 27-21
ಹಾಸನ: 22-19
ಚಾಮರಾಜನಗರ: 26-21
ಚಿಕ್ಕಬಳ್ಳಾಪುರ: 26-20
ಕೋಲಾರ: 27-21
ತುಮಕೂರು: 26-21
ಉಡುಪಿ: 27-24
ಚಿಕ್ಕಮಗಳೂರು: 21-19
ದಾವಣಗೆರೆ: 26-22
ಚಿತ್ರದುರ್ಗ: 26-21
ಹಾವೇರಿ: 25-21
ಬಳ್ಳಾರಿ: 28-23
ಗದಗ: 25-21
ಕೊಪ್ಪಳ: 26-22
ರಾಯಚೂರು: 26-23
ಯಾದಗಿರಿ: 26-23
ವಿಜಯಪುರ: 24-22
ಬೀದರ್: 23-21
ಕಲಬುರಗಿ: 25-22
ಬಾಗಲಕೋಟೆ: 26-22