ಇನ್ನೂ 3-4 ದಿನಗಳ ಕಾಲ ಕರ್ನಾಟಕದ ಹಲವು ಜಿಲ್ಲೆಗಳಿಗೆ ಶೀತಗಾಳಿಯ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಕರಾವಳಿ, ಉತ್ತರ, ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಶೀತಗಾಳಿಯ ಎಚ್ಚರಿಕೆಯನ್ನು ನೀಡಲಾಗಿದೆ. ಉತ್ತರ ಕನ್ನಡ, ಬೆಳಗಾವಿ, ಬೀದರ್, ವಿಜಯಪುರ, ಕಲಬುರಗಿ, ಹಾವೇರಿ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಶೀತಗಾಳಿ ಇರಲಿದೆ.
ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಮಂಡ್ಯ ದಾವಣಗೆರೆ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆಗಳಿಗೆ ಎಚ್ಚರಿಕೆ ನೀಡಿದ್ದು, ಜನ ಅಗತ್ಯ ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ.
ಇನ್ನು ರಾಜ್ಯಾದ್ಯಂತ ಚುಮುಚುಮು ಚಳಿ ಹೆಚ್ಚಾಗಿದ್ದು, ಕೆಲವೆಡೆ 15 ಡಿಗ್ರಿಗಿಂತ ಕೆಳಗೆ ತಾಪಮಾನ ಕುಸಿದಿದೆ. ಮುಂದಿನ 3 ದಿನಗಳಲ್ಲಿ ತಾಪಮಾನ ಇನ್ನಷ್ಟು ಕುಸಿಯುವ ಸಾಧ್ಯತೆ ಇದೆ. ರಾಜ್ಯಾದ್ಯಂತ ಕನಿಷ್ಠ ಉಷ್ಣಾಂಶ 2 ರಿಂದ 4 ಡಿಗ್ರಿ ಸೆಲ್ಸಿಯಸ್ ಇಳಿಕೆಯಾಗುವ ಸಾಧ್ಯತೆ ಇದ್ದು, ರಾಜ್ಯಾದ್ಯಂತ ಮಂಜು ಮುಸುಕಿನ ವಾತಾವರಣ ಮುಂದುವರೆಯಲಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 26-17
ಮಂಗಳೂರು: 31-22
ಶಿವಮೊಗ್ಗ: 28-16
ಬೆಳಗಾವಿ: 28-16
ಮೈಸೂರು: 29-17
ಮಂಡ್ಯ: 28-17
ಮಡಿಕೇರಿ: 28-16
ರಾಮನಗರ: 28-17
ಹಾಸನ: 26-15
ಚಾಮರಾಜನಗರ: 30-17
ಚಿಕ್ಕಬಳ್ಳಾಪುರ: 25-14
ಕೋಲಾರ: 24-15
ತುಮಕೂರು: 27-16
ಉಡುಪಿ: 29-21
ಕಾರವಾರ: 33-22
ಚಿಕ್ಕಮಗಳೂರು: 24-14
ದಾವಣಗೆರೆ: 28-17
ಹುಬ್ಬಳ್ಳಿ: 28-16
ಚಿತ್ರದುರ್ಗ: 26-16
ಹಾವೇರಿ: 29-17
ಬಳ್ಳಾರಿ: 28-17
ಗದಗ: 27-16
ಕೊಪ್ಪಳ: 28-17
ರಾಯಚೂರು: 29-18
ಯಾದಗಿರಿ: 29-17
ವಿಜಯಪುರ: 29-17
ಬೀದರ್: 28-15
ಕಲಬುರಗಿ: 29-16
ಬಾಗಲಕೋಟೆ: 29-17