ಕಳೆದ ಕೆಲ ದಿನಗಳಿಂದ ಬಿಡುವು ನೀಡಿದ್ದ ವರುಣದೇವ ಇಂದಿನಿಂದ ಮತ್ತೆ ಆರ್ಭಟ ಆರಂಭಿಸಲಿದ್ದಾನೆ. ಮುಂದಿನ ೩ ದಿನಗಳ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಾರವಾರ, ರಾಯಚೂರು, ಯಾದಗಿರಿ, ಕಲಬುರಗಿ ಸೇರಿದಂತೆ ಕೆಲ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಎಲ್ಲಾ ಜಿಲ್ಲೆಗಳಲ್ಲಿಯೂ ಬೆಳಗ್ಗೆ ಮತ್ತು ಸಂಜೆ ಮೋಡ ಕವಿದ ವಾತಾವರಣ ಜೊತೆಗೆ ಚಳಿ ಇರಲಿದೆ.
ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ. ಮಂಗಳೂರು, ಉಡುಪಿ ಮತ್ತು ಕಾರಾವಾರ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಇರಲಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 26-20
ಮಂಗಳೂರು: 29-24
ಶಿವಮೊಗ್ಗ: 28-21
ಬೆಳಗಾವಿ: 27-21
ಮೈಸೂರು: 27-21
ಮಂಡ್ಯ: 28-21
ಮಡಿಕೇರಿ: 23-17
ರಾಮನಗರ: 27-21
ಹಾಸನ: 26-19
ಚಾಮರಾಜನಗರ: 27-21
ಚಿಕ್ಕಬಳ್ಳಾಪುರ: 27-19
ಕೋಲಾರ: 27-20
ತುಮಕೂರು: 27-21
ಉಡುಪಿ: 29-24
ಕಾರವಾರ: 29-24
ಚಿಕ್ಕಮಗಳೂರು: 25-19
ದಾವಣಗೆರೆ: 28-21
ಚಿತ್ರದುರ್ಗ: 27-21
ಹಾವೇರಿ: 28-21
ಬಳ್ಳಾರಿ: 29-22
ಗದಗ: 28-22
ಕೊಪ್ಪಳ: 29-23
ರಾಯಚೂರು: 29-23
ಯಾದಗಿರಿ: 29-23
ವಿಜಯಪುರ: 28-22
ಬೀದರ್: 27-21
ಕಲಬುರಗಿ: 29-22
ಬಾಗಲಕೋಟೆ: 29-22