ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಈಗಾಗಲೇ ರಾಜ್ಯದ ಹಲವೆಡೆ ರೆಡ್ ಹಾಗೂ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಒಳನಾಡು ಹಾಗು ಕರಾವಳಿ ಭಾಗದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಗಳು ಇರುವುದರಿಂದ ಇಂದು ರೆಡ್ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಒಳನಾಡಿನಲ್ಲಿ ಗುಡುಗು ಮಿಂಚು ಸಹಿತ ಮಳೆ ಹಾಗೂ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಈ ಹಿನ್ನೆಲೆ ಮೀನುಗಾರರನ್ನು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಸಿಲಿಕಾನ್ ಸಿಟಿಯಲ್ಲೂ ಮೋಡಕವಿದ ವಾತಾವರಣ ಇರಲಿದ್ದು, ಆಗಾಗ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಬೀದರ್ ಜಿಲ್ಲೆಯಲ್ಲಿ 29 ಗರಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 27-21
ಮಂಗಳೂರು: 27-24
ಶಿವಮೊಗ್ಗ: 26-22
ಬೆಳಗಾವಿ: 25-21
ಮೈಸೂರು: 28-21
ಮಂಡ್ಯ: 28-22
ಮಡಿಕೇರಿ: 21-17
ರಾಮನಗರ: 28-22
ಹಾಸನ: 24-19
ಚಾಮರಾಜನಗರ: 29-22
ಚಿಕ್ಕಬಳ್ಳಾಪುರ: 28-21
ಕೋಲಾರ: 28-22
ತುಮಕೂರು: 27-21
ಉಡುಪಿ: 27-24
ಕಾರವಾರ: 28-26
ಚಿಕ್ಕಮಗಳೂರು: 23-18
ದಾವಣಗೆರೆ: 26-22
ಹುಬ್ಬಳ್ಳಿ: 26-22
ಚಿತ್ರದುರ್ಗ: 26-21
ಹಾವೇರಿ: 26-22
ಬಳ್ಳಾರಿ: 28-23
ಗದಗ: 26-22
ಕೊಪ್ಪಳ: 27-23
ರಾಯಚೂರು: 27-23
ಯಾದಗಿರಿ: 27-23
ವಿಜಯಪುರ: 26-22
ಬೀದರ್: 29-23 a
ಕಲಬುರಗಿ: 28-23
ಬಾಗಲಕೋಟೆ: 27-23