ಆ.13 ರವರೆಗೆ ರಾಜ್ಯದ ಹಲವೆಡೆ ಗಾಳಿಯೊಂದಿಗೆ ಭಾರೀ ಮಳೆ ಆಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಕರ್ನಾಟಕ ಭಾಗದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕೆಲ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ತುಮಕೂರು, ಬಾಗಲಕೋಟೆ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ನಗರಗಳ ಹವಾಮಾನ ವರದಿ
ಬೆಂಗಳೂರು: 26-20
ಮಂಗಳೂರು: 26-23
ಶಿವಮೊಗ್ಗ: 25-21
ಬೆಳಗಾವಿ: 26-20
ಮೈಸೂರು: 28-21
ಮಂಡ್ಯ: 28-21
ಮಡಿಕೇರಿ: 23-19
ರಾಮನಗರ: 27-21
ಹಾಸನ: 24-19
ಚಾಮರಾಜನಗರ: 29-20
ಚಿಕ್ಕಬಳ್ಳಾಪುರ: 26-19
ಕೋಲಾರ: 28-21
ತುಮಕೂರು: 27-19
ಉಡುಪಿ: 27-23
ಕಾರವಾರ: 27-24
ಚಿಕ್ಕಮಗಳೂರು: 23-18
ದಾವಣಗೆರೆ: 26-21
ಹುಬ್ಬಳ್ಳಿ: 26-21
ಚಿತ್ರದುರ್ಗ: 26-21
ಹಾವೇರಿ: 27-21
ಬಳ್ಳಾರಿ: 31-23
ಗದಗ: 27-21
ಕೊಪ್ಪಳ: 28-22
ರಾಯಚೂರು: 30-23
ಯಾದಗಿರಿ: 30-23
ವಿಜಯಪುರ: 28-22
ಬೀದರ್: 27-23
ಕಲಬುರಗಿ: 29-23
ಬಾಗಲಕೋಟೆ: 29-22