ಇಂದು ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಸಾಧಾರಣದಿಂದ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮೈಸೂರು, ಮಂಡ್ಯ, ಕೊಡಗು, ಹಾಸನ ಮತ್ತು ತುಮಕೂರು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಈ ಜಿಲ್ಲೆಗಳನ್ನು ಹೊರತು ಪಡಿಸಿದರೆ ಕರಾವಳಿ ಕರ್ನಾಟಕ, ಉತ್ತರ ಒಳನಾಡು ಕರ್ನಾಟಕ ಮತ್ತು ದಕ್ಷಿಣ ಒಳನಾಡು ಕರ್ನಾಟಕದ ಉಳಿದ ಜಿಲ್ಲೆಗಳಲ್ಲಿ ಒಣ ಹವಾಮಾನ ಇರುವ ಸಾಧ್ಯತೆ ಇದೆ.
ವಿಜಯಪುರ, ಬೀದರ್, ಕಲಬುರಗಿ, ಬಾಗಲಕೋಟೆ, ಧಾರವಾಡ, ಬೆಳಗಾವಿ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಸಾಧಾರಣದಿಂದ ಮಧ್ಯಮ ಪ್ರಮಾಣದಲ್ಲಿ ಮಂಜು ಬೀಳುವ ಸಾಧ್ಯತೆ ಇದೆ ಎಂದು ಹೇಳಿದೆ. ಜನವರಿ 15ರಿಂದ ಜನವರಿ 17ರವರೆಗೂ ರಾಜ್ಯಾದ್ಯಂತ ಒಣಹವೆ ಇರುವ ಸಾಧ್ಯತೆ ಇದ್ದು, ರಾಜ್ಯದಾದ್ಯಂತ ಕನಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇರುವುದಿಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 26-18
ಮಂಗಳೂರು: 31-23
ಶಿವಮೊಗ್ಗ: 29-19
ಬೆಳಗಾವಿ: 31-19
ಮೈಸೂರು: 29-18
ಮಂಡ್ಯ: 28-19
ಮಡಿಕೇರಿ: 28-17
ರಾಮನಗರ: 28-19
ಹಾಸನ: 27-17
ಚಾಮರಾಜನಗರ: 29-19
ಚಿಕ್ಕಬಳ್ಳಾಪುರ: 25-17
ಕೋಲಾರ: 25-17
ತುಮಕೂರು: 27-17
ಉಡುಪಿ: 31-23
ಕಾರವಾರ: 32-24
ಚಿಕ್ಕಮಗಳೂರು: 25-17
ದಾವಣಗೆರೆ: 29-20
ಹುಬ್ಬಳ್ಳಿ: 31-19
ಚಿತ್ರದುರ್ಗ: 28-18
ಹಾವೇರಿ: 31-20
ಬಳ್ಳಾರಿ: 29-19
ಗದಗ: 29-19
ಕೊಪ್ಪಳ: 30-19
ರಾಯಚೂರು: 31-20
ಯಾದಗಿರಿ: 31-19
ವಿಜಯಪುರ: 31-20
ಬೀದರ್: 30-18
ಕಲಬುರಗಿ: 31-19
ಬಾಗಲಕೋಟೆ: 32-20