ಮುಂಗಾರು ರಾಜ್ಯವನ್ನು ಪ್ರವೇಶಿಸಿ 11 ದಿನ ಕಳೆದಿದೆ. ಅಲ್ಲಿವರೆಗೂ ರಾಜ್ಯದಲ್ಲಿ ಕೆಲವು ಭಾಗಗಳಲ್ಲಿ ಮಾತ್ರ ಮಳೆ ಆಗುತ್ತಿತ್ತು. ಆದರೆ ಹವಾಮಾನ ಇಲಾಖೆ ಮುಂಗಾರು ಮಳೆ ಎಲ್ಲಕಡೆ ಅಬ್ಬರಿಸುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ಕೊಟ್ಟಿದೆ.
ಯಾದಗಿರಿ, ವಿಜಯಪುರ, ಕೊಪ್ಪಳ, ಬಳ್ಳಾರಿ, ಬಾಗಲಕೋಟೆ, ಗದಗ, ಹಾವೇರಿ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಡಗು, ಶಿವಮೊಗ್ಗದಲ್ಲಿ ಭಾರೀ ಮಳೆ ಆಗುವ ಮುನ್ಸೂಚನೆ ಇದ್ದು. ಕರಾವಳಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ 3 ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉಳಿದಂತೆ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ರಾಮನಗರ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದ್ದು, ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 30-21
ಮಂಗಳೂರು: 31-25
ಶಿವಮೊಗ್ಗ: 31-22
ಬೆಳಗಾವಿ: 30-22
ಮೈಸೂರು: 32-21
ಮಂಡ್ಯ: 30-22
ಕೊಡಗು: 28-18
ರಾಮನಗರ: 32-22
ಹಾಸನ: 28-19
ಚಾಮರಾಜನಗರ: 32-21
ಚಿಕ್ಕಬಳ್ಳಾಪುರ: 28-19
ಕೋಲಾರ: 32-22
ತುಮಕೂರು: 31-21
ಉಡುಪಿ: 31-25
ಕಾರವಾರ: 19-11
ಚಿಕ್ಕಮಗಳೂರು: 28-19
ದಾವಣಗೆರೆ: 33-22
ಚಿತ್ರದುರ್ಗ: 32-21
ಹಾವೇರಿ: 33-23
ಬಳ್ಳಾರಿ: 36-24
ಗದಗ: 33-22
ಕೊಪ್ಪಳ: 34-22
ರಾಯಚೂರು: 36-26
ಯಾದಗಿರಿ: 36-26
ವಿಜಯಪುರ: 34-23
ಬೀದರ್: 32-24
ಕಲಬುರಗಿ: 36-24
ಬಾಗಲಕೋಟೆ: 34-23