ಕಳೆದ ಎರಡು ಮೂರು ದಿನಗಳಿಂದ ರಾಜ್ಯ ಕರಾವಳಿ ಭಾಗದಲ್ಲಿ ಬಿಡುವು ನೀಡಿದ್ದ ವರುಣ ಮತ್ತೆ ಅಬ್ಬರಿಸುವ ಮುನ್ಸೂಚನೆ ನೀಡಿದ್ದು, ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.
ಶುಕ್ರವಾರ ಕರಾವಳಿಯ ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದ್ದು, ಗಾಳಿ, ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ಸೂಚನೆ ನೀಡಲಾಗಿದೆ. ಇನ್ನು ದಕ್ಷಿಣ ಒಳನಾಡಿಗೆ ಯೆಲ್ಲೋ ಅಲರ್ಟ್ ನೀಡಲಾಗಿದ್ದು, ಬೆಂಗಳೂರು ನಗರದಲ್ಲೂ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರು ಮತ್ತು ಕಲಬುರಗಿಯಲ್ಲಿ ಗರಿಷ್ಠ 33 ಡಿಗ್ರಿ, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 27-20
ಮಂಗಳೂರು: 27-24
ಶಿವಮೊಗ್ಗ: 27-22
ಬೆಳಗಾವಿ: 25-21
ಮೈಸೂರು: 27-21
ಮಂಡ್ಯ: 29-21
ಮಡಿಕೇರಿ: 21-17
ರಾಮನಗರ: 29-21
ಹಾಸನ: 26-19
ಚಾಮರಾಜನಗರ: 28-21
ಚಿಕ್ಕಬಳ್ಳಾಪುರ: 28-21
ಕೋಲಾರ: 29-21
ತುಮಕೂರು: 28-21
ಉಡುಪಿ: 27-24
ಕಾರವಾರ: 27-25
ಚಿಕ್ಕಮಗಳೂರು: 24-19
ದಾವಣಗೆರೆ: 28-22
ಹುಬ್ಬಳ್ಳಿ: 27-22
ಚಿತ್ರದುರ್ಗ: 28-21
ಹಾವೇರಿ: 28-22
ಬಳ್ಳಾರಿ: 32-24
ಗದಗ: 28-22
ಕೊಪ್ಪಳ: 30-23
ರಾಯಚೂರು: 33-24
ಯಾದಗಿರಿ: 32-24
ವಿಜಯಪುರ: 31-23
ಬೀದರ್: 30-23
ಕಲಬುರಗಿ: 33-24
ಬಾಗಲಕೋಟೆ: 31-23
Web Stories