ರಾಜ್ಯದಲ್ಲಿ ವರುಣನ ಅಬ್ಬರ ಜೋರಾಗಿದೆ. ಇಂದು ಕೂಡ ರಾಜ್ಯಾದ್ಯಂತ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಳೆ ಹಿನ್ನೆಲೆ ಕರಾವಳಿ, ಕೊಡಗು, ಚಿಕ್ಕಮಗಳೂರಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಹಾಸನ, ಹಾವೇರಿ, ಧಾರವಾಡ, ಬೆಳಗಾವಿ, ಬೀದರ್ಗೆ ಆರೆಂಜ್ ಅಲರ್ಟ್ ಕೊಡಲಾಗಿದೆ. ಉಳಿದೆಡೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಮುಂದಿನ ವಾರ ಸಹ ಕರಾವಳಿ ಹಾಗೂ ಮಲೆನಾಡು ಭಾಗದ 7 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಇರಲಿದೆ. ಮೈಸೂರು, ದಾವಣಗೆರೆ, ಹಾವೇರಿ, ಗದಗ, ಕೊಪ್ಪಳ, ಧಾರವಾಡ, ಬಾಗಲಕೋಟೆ, ಬೆಳಗಾವಿ, ಬೀದರ್ ಜಿಲ್ಲೆಗಳು ಆರೆಂಜ್ ಅಲರ್ಟ್ನಲ್ಲಿ ಮುಂದುವರಿಯಲಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಜಿಲ್ಲೆಯಲ್ಲಿ ಗರಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 24-21
ಮಂಗಳೂರು: 26-24
ಶಿವಮೊಗ್ಗ: 23-21
ಬೆಳಗಾವಿ: 24-22
ಮೈಸೂರು: 25-21
ಮಂಡ್ಯ: 26-21
ಮಡಿಕೇರಿ: 22-19
ರಾಮನಗರ: 26-21
ಹಾಸನ: 22-19
ಚಾಮರಾಜನಗರ: 26-21
ಚಿಕ್ಕಬಳ್ಳಾಪುರ: 25-21
ಕೋಲಾರ: 27-21
ತುಮಕೂರು: 24-21
ಉಡುಪಿ: 26-25
ಕಾರವಾರ: 27-26
ಚಿಕ್ಕಮಗಳೂರು: 21-19
ದಾವಣಗೆರೆ: 26-22
ಹುಬ್ಬಳ್ಳಿ: 26-22
ಚಿತ್ರದುರ್ಗ: 25-22
ಹಾವೇರಿ: 27-22
ಬಳ್ಳಾರಿ: 29-24
ಗದಗ: 27-22
ಕೊಪ್ಪಳ: 28-23
ರಾಯಚೂರು: 31-25
ಯಾದಗಿರಿ: 30-24
ವಿಜಯಪುರ: 29-23
ಬೀದರ್: 29-24
ಕಲಬುರಗಿ: 29-24
ಬಾಗಲಕೋಟೆ: 29-24