ರಾಜ್ಯದ ಬಹುತೇಕ ಭಾಗದಲ್ಲಿ ಮುಂದಿನ 4 ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಮಹಾರಾಷ್ಟ್ರದಿಂದ ಕೇರಳ ಕರಾವಳಿ ತೀರದಲ್ಲಿ ಮೇಲ್ಮೈ ಸುಳಿಗಾಳಿ ಎದ್ದಿರುವ ಹಿನ್ನೆಲೆ ರಾಜ್ಯದ ಕರಾವಳಿ ಜಿಲ್ಲೆಗಳಿಗೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದೆ.
ಭಾರೀ ಮಳೆಯ ಹಿನ್ನೆಲೆ ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ದಕ್ಷಿಣ ಒಳನಾಡಿನ ಶಿವಮೊಗ್ಗ, ದಕ್ಷಿಣ ಕನ್ನಡ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಸೇರಿ ಕೋಲಾರ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ 5 ದಿನಗಳ ಕಾಲ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.
ಬೆಂಗಳೂರಿನಲ್ಲಿ ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರಿನಲ್ಲಿ ಗರಿಷ್ಠ 32 ಡಿಗ್ರಿ, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 28-20
ಮಂಗಳೂರು: 28-24
ಶಿವಮೊಗ್ಗ: 27-21
ಬೆಳಗಾವಿ: 25-21
ಮೈಸೂರು: 29-21
ಮಂಡ್ಯ: 31-21
ಮಡಿಕೇರಿ: 22-17
ರಾಮನಗರ: 29-21
ಹಾಸನ: 26-19
ಚಾಮರಾಜನಗರ: 30-21
ಚಿಕ್ಕಬಳ್ಳಾಪುರ: 27-19
ಕೋಲಾರ: 29-21
ತುಮಕೂರು: 28-20
ಉಡುಪಿ: 28-24
ಕಾರವಾರ: 28-25
ಚಿಕ್ಕಮಗಳೂರು: 24-19
ದಾವಣಗೆರೆ: 28-22
ಹುಬ್ಬಳ್ಳಿ: 27-22
ಚಿತ್ರದುರ್ಗ: 28-21
ಹಾವೇರಿ: 28-22
ಬಳ್ಳಾರಿ: 32-23
ಗದಗ: 28-22
ಕೊಪ್ಪಳ: 29-23
ರಾಯಚೂರು: 32-24
ಯಾದಗಿರಿ: 31-23
ವಿಜಯಪುರ: 29-23
ಬೀದರ್: 27-22
ಕಲಬುರಗಿ: 29-23
ಬಾಗಲಕೋಟೆ: 30-23
Web Stories