ರಾಜ್ಯದಾದ್ಯಂತ ಮುಂದಿನ 5 ದಿನ ಭಾರೀ ಮಳೆಯ ಎಚ್ಚರಿಕೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಕರಾವಳಿಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿಯ ಮೂರು ಜಿಲ್ಲೆಗಳಿಗೂ ಇಂದು ರೆಡ್ ಅಲರ್ಟ್ ಘೋಷಿಸಲಾಗಿದೆ. ಬಳಿಕ ಮೂರು ದಿನ ಆರೆಂಜ್ ಅಲರ್ಟ್ ಘೋಷಿಸಿದೆ.
ಉತ್ತರ ಒಳನಾಡಿಗೆ ಇಂದು ಆರೆಂಜ್ ಅಲರ್ಟ್ ಘೋಷಿಸಿದ್ದು, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಸಾಧಾರಣ ಅಥವಾ ತುಂತುರು ಮಳೆಯಾಗುವ ಸಾಧ್ಯತೆಯಿದೆ. ನಗರದಲ್ಲಿ ಮುಂದಿನ ಮೂರ್ನಾಲ್ಕು ದಿನ ಮೋಡ ಕವಿದ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 24-21
ಮಂಗಳೂರು: 27-25
ಶಿವಮೊಗ್ಗ: 24-22
ಬೆಳಗಾವಿ: 23-21
ಮೈಸೂರು: 26-21
ಮಂಡ್ಯ: 26-22
ಮಡಿಕೇರಿ: 19-17
ರಾಮನಗರ: 26-22
ಹಾಸನ: 23-19
ಚಾಮರಾಜನಗರ: 26-22
ಚಿಕ್ಕಬಳ್ಳಾಪುರ: 25-21
ಕೋಲಾರ: 26-22
ತುಮಕೂರು: 25-21
ಉಡುಪಿ: 27-25
ಕಾರವಾರ: 27-25
ಚಿಕ್ಕಮಗಳೂರು: 22-19
ದಾವಣಗೆರೆ: 25-22
ಹುಬ್ಬಳ್ಳಿ: 24-21
ಚಿತ್ರದುರ್ಗ: 24-21
ಹಾವೇರಿ: 24-22
ಬಳ್ಳಾರಿ: 28-24
ಗದಗ: 25-22
ಕೊಪ್ಪಳ: 26-22
ರಾಯಚೂರು: 28-24
ಯಾದಗಿರಿ: 28-24
ವಿಜಯಪುರ: 27-23
ಬೀದರ್: 27-23
ಕಲಬುರಗಿ: 28-23
ಬಾಗಲಕೋಟೆ: 27-23