ರಾಜ್ಯದಲ್ಲಿ ಮುಂಗಾರು ಅಬ್ಬರ ಜೋರಾಗಿದ್ದು, ಮುಂದಿನ 4 ದಿನಗಳ ಕಾಲ ರಾಜ್ಯಾದ್ಯಂತ ಅಲ್ಲಲ್ಲಿ ಗುಡುಗು, ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದು ಕರಾವಳಿ ಜಿಲ್ಲೆಗಳಲ್ಲಿ ಗಾಳಿ ಸಹಿತ ಮಳೆಯಾಗುವ ಸಂಭವವಿದೆ. ಬೆಂಗಳೂರಿನ ಕೆಲವೆಡೆ ಸಂಜೆ ವೇಳೆಗೆ ಹಗುರ ಮಳೆಯಾಗಲಿದೆ ಎಂದು ಇಲಾಖೆ ವರದಿ ಮಾಡಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ನಗರಗಳ ಹವಾಮಾನ ವರದಿ:
ಬೆಂಗಳೂರು: 32-22
ಮಂಗಳೂರು: 32-27
ಶಿವಮೊಗ್ಗ: 33-24
ಬೆಳಗಾವಿ: 32-22
ಮೈಸೂರು: 33-23
ಮಂಡ್ಯ: 33-23
ಮಡಿಕೇರಿ: 29-22
ರಾಮನಗರ: 33-23
ಹಾಸನ: 31-22
ಚಾಮರಾಜನಗರ: 33-23
ಚಿಕ್ಕಬಳ್ಳಾಪುರ: 31-22

ಕೋಲಾರ: 32-23
ತುಮಕೂರು: 32-22
ಉಡುಪಿ: 32-27
ಕಾರವಾರ: 32-28
ಚಿಕ್ಕಮಗಳೂರು: 28-19
ದಾವಣಗೆರೆ: 34-24
ಹುಬ್ಬಳ್ಳಿ: 34-23
ಚಿತ್ರದುರ್ಗ: 33-23
ಹಾವೇರಿ: 33-23
ಬಳ್ಳಾರಿ: 36-26
ಗದಗ: 34-23
ಕೊಪ್ಪಳ: 36-24

ರಾಯಚೂರು: 37-27
ಯಾದಗಿರಿ: 37-27
ವಿಜಯಪುರ: 37-25
ಕಲಬುರಗಿ: 37-26
ಬಾಗಲಕೋಟೆ: 37-24
