ಕರ್ನಾಟಕದ ಹಲವೆಡೆ ಇಂದೂ ಕೂಡ ಮಳೆ ಮುಂದುವರೆಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನ.25ರ ರಿಂದ ಡಿ.3ರವರೆಗೂ ಕರ್ನಾಟಕದ ಕೆಲವು ಭಾಗಗಳಲ್ಲಿ ಮಳೆ ಮುಂದುವರೆಯಲಿದೆ ಎಂದು ಮುನ್ಸೂಚನೆ ಕೊಟ್ಟಿದೆ.
ದಕ್ಷಿಣ ಕನ್ನಡ, ಉಡುಪಿ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು, ಚಾಮರಾಜನಗರ, ಮಂಡ್ಯ, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು ಮತ್ತು ರಾಮನಗರ ಜಿಲ್ಲೆಗಳ ಕೆಲವೆಡೆ ಹಗುರ, ಸಾಧಾರಣ ಮಳೆ ಹಾಗೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು ಮತ್ತು ಉತ್ತರ ಕನ್ನಡ, ಬಳ್ಳಾರಿ, ವಿಜಯನಗರ, ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಒಣ ಹವೆಯಿರುವ ಸಾಧ್ಯತೆ ಇದೆ ಎಂದು ಹವಾಮಾನ ವರದಿ ತಿಳಿಸಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 27-18
ಮಂಗಳೂರು: 33-24
ಶಿವಮೊಗ್ಗ: 31-18
ಬೆಳಗಾವಿ: 29-17
ಮೈಸೂರು: 29-18
ಮಂಡ್ಯ: 29-18
ಮಡಿಕೇರಿ: 27-15
ರಾಮನಗರ: 29-19
ಹಾಸನ: 27-16
ಚಾಮರಾಜನಗರ: 29-19
ಚಿಕ್ಕಬಳ್ಳಾಪುರ: 26-17
ಕೋಲಾರ: 27-17
ತುಮಕೂರು: 28-17
ಉಡುಪಿ: 33-23
ಕಾರವಾರ: 34-23
ಚಿಕ್ಕಮಗಳೂರು: 27-16
ದಾವಣಗೆರೆ: 31-18
ಹುಬ್ಬಳ್ಳಿ: 31-17
ಚಿತ್ರದುರ್ಗ: 28-17
ಹಾವೇರಿ: 31-18
ಬಳ್ಳಾರಿ: 31-18
ಗದಗ: 30-17
ಕೊಪ್ಪಳ: 31-18
ರಾಯಚೂರು: 31-18
ಯಾದಗಿರಿ: 31-18
ವಿಜಯಪುರ: 31-17
ಬೀದರ್: 29-15
ಕಲಬುರಗಿ: 31-17
ಬಾಗಲಕೋಟೆ: 31-17