ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಅಲ್ಲದೇ ಧಾರಕಾರ ಮಳೆಯ ಪರಿಣಾಮ ಹಾನಿಗಳು ಉಂಟಾಗಿದ್ದು, ಕೆಲವು ದೇವಸ್ಥಾನಗಳು ಮುಳುಗಡೆಯಾಗಿದೆ. ಇಂದು ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಮಂಗಳೂರು, ಉಡುಪಿ, ಕಾರವಾರ, ಹಾವೇರಿ ಹಾಗೂ ಗದಗದಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಗಳಿದ್ದು, ಇನ್ನುಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ 19 ಡಿಗ್ರಿ, ಕನಿಷ್ಠ 17 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 27-21
ಮಂಗಳೂರು: 28-26
ಶಿವಮೊಗ್ಗ: 24-21
ಬೆಳಗಾವಿ: 23-21
ಮೈಸೂರು: 27-21
ಮಂಡ್ಯ: 29-22
ಮಡಿಕೇರಿ: 19-17
ರಾಮನಗರ: 28-22
ಹಾಸನ: 23-19
ಚಾಮರಾಜನಗರ: 28-22
ಚಿಕ್ಕಬಳ್ಳಾಪುರ: 27-21
ಕೋಲಾರ: 28-22
ತುಮಕೂರು: 27-21
ಉಡುಪಿ: 28-25
ಕಾರವಾರ: 27-26
ಚಿಕ್ಕಮಗಳೂರು: 21-18
ದಾವಣಗೆರೆ: 25-22
ಹುಬ್ಬಳ್ಳಿ: 24-21
ಚಿತ್ರದುರ್ಗ: 24-21
ಹಾವೇರಿ: 24-22
ಬಳ್ಳಾರಿ: 28-23
ಗದಗ: 24-22
ಕೊಪ್ಪಳ: 26-22
ರಾಯಚೂರು: 27-23
ಯಾದಗಿರಿ: 26-23
ವಿಜಯಪುರ: 26-22
ಬೀದರ್: 24-22
ಕಲಬುರಗಿ: 26-23
ಬಾಗಲಕೋಟೆ: 26-23
Web Stories