ಇಂದು ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಅಲ್ಪ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿಯ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಭಾಗಕ್ಕೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದ್ದು, ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.
ಬೆಂಗಳೂರು ನಗರ, ಗ್ರಾಮಾಂತರ, ತುಮಕೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ಕೋಲಾರ, ರಾಮನಗರ, ಶಿವಮೊಗ್ಗ, ವಿಜಯನಗರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಿದ್ದು, ಗುಡುಗು-ಮಿಂಚು ಸಹಿತ ಮಳೆ ಎಚ್ಚರಿಕೆಯನ್ನು ನೀಡಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 37 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರು ಜಿಲ್ಲೆಯಲ್ಲಿ ಗರಿಷ್ಠ ತಾಪಮಾನ 41 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 37-23
ಮಂಗಳೂರು: 33-27
ಶಿವಮೊಗ್ಗ: 37-23
ಬೆಳಗಾವಿ: 34-23
ಮೈಸೂರು: 38-23
ಮಂಡ್ಯ: 38-23
ಮಡಿಕೇರಿ: 29-19
ರಾಮನಗರ: 38-23
ಹಾಸನ: 35-21
ಚಾಮರಾಜನಗರ: 37-22
ಚಿಕ್ಕಬಳ್ಳಾಪುರ: 37-22
ಕೋಲಾರ: 37-22
ತುಮಕೂರು: 37-23
ಉಡುಪಿ: 34-27
ಕಾರವಾರ: 32-24
ಚಿಕ್ಕಮಗಳೂರು: 33-20
ದಾವಣಗೆರೆ: 38-24
ಹುಬ್ಬಳ್ಳಿ: 36-24
ಚಿತ್ರದುರ್ಗ: 37-23
ಹಾವೇರಿ: 37-23
ಬಳ್ಳಾರಿ: 40-27
ಗದಗ: 37-24
ಕೊಪ್ಪಳ: 38-26
ರಾಯಚೂರು: 41-27
ಯಾದಗಿರಿ: 40-28
ವಿಜಯಪುರ: 37-26
ಬೀದರ್: 37-25
ಕಲಬುರಗಿ: 38-27
ಬಾಗಲಕೋಟೆ: 38-26