ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯದಲ್ಲಿ ಮಳೆಯಾಗುತ್ತಿದೆ. ಮೇ 30ರವರೆಗೆ ಮಳೆ ಮುಂದುವರೆಯಲಿದ್ದು, ರಾಜ್ಯದ ಬಹುತೇಕ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಿಗೆ ಐದು ದಿನ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೀದರ್, ಕಲಬುರಗಿ, ಯಾದಗಿರಿ ವಿಜಯಪುರ ಬೆಳಗಾವಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರು ಜಿಲ್ಲೆಯಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 25-21
ಮಂಗಳೂರು: 27-25
ಶಿವಮೊಗ್ಗ: 24-22
ಬೆಳಗಾವಿ: 24-21
ಮೈಸೂರು: 26-22
ಮಂಡ್ಯ: 26-22
ಮಡಿಕೇರಿ: 22-19
ರಾಮನಗರ: 26-22
ಹಾಸನ: 23-19
ಚಾಮರಾಜನಗರ: 27-22
ಚಿಕ್ಕಬಳ್ಳಾಪುರ: 26-21
ಕೋಲಾರ: 27-22
ತುಮಕೂರು: 26-22
ಉಡುಪಿ: 27-25
ಕಾರವಾರ: 28-26
ಚಿಕ್ಕಮಗಳೂರು: 22-19
ದಾವಣಗೆರೆ: 26-22
ಹುಬ್ಬಳ್ಳಿ: 26-22
ಚಿತ್ರದುರ್ಗ: 26-22
ಹಾವೇರಿ: 27-22
ಬಳ್ಳಾರಿ: 30-23
ಗದಗ: 26-22
ಕೊಪ್ಪಳ: 28-22
ರಾಯಚೂರು: 31-24
ಯಾದಗಿರಿ: 29-24
ವಿಜಯಪುರ: 28-22
ಬೀದರ್: 29-24
ಕಲಬುರಗಿ: 29-23
ಬಾಗಲಕೋಟೆ: 27-22