ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೆರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಸಿಲಿಕಾನ್ ಸಿಟಿ ಬೆಂಗಳೂರು, ಕರಾವಳಿ, ಮಲೆನಾಡಿನ ಭಾಗಗಳಲ್ಲಿಯೂ ಕೂಡ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.
ಉತ್ತರ ಒಳನಾಡಿನ ಭಾಗಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಧಾರವಾಡ, ಹಾವೇರಿ, ಗದಗ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಹಾಸನ, ಮಂಡ್ಯ, ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ. ಬಳ್ಳಾರಿ ಮತ್ತು ರಾಯಚೂರು ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಇರಲಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 29-20
ಮಂಗಳೂರು: 29-24
ಶಿವಮೊಗ್ಗ: 30-22
ಬೆಳಗಾವಿ: 28-21
ಮೈಸೂರು: 30-21
ಮಂಡ್ಯ: 31-22
ಕೊಡಗು: 26-18
ರಾಮನಗರ: 31-21
ಹಾಸನ: 28-19
ಚಾಮರಾಜನಗರ: 31-21
ಚಿಕ್ಕಬಳ್ಳಾಪುರ: 29-20
ಕೋಲಾರ: 30-21
ತುಮಕೂರು: 30-21
ಉಡುಪಿ: 29-24
ಕಾರವಾರ: 29-26
ಚಿಕ್ಕಮಗಳೂರು: 27-19
ದಾವಣಗೆರೆ: 31-22
ಚಿತ್ರದುರ್ಗ: 30-22
ಹಾವೇರಿ: 31-22
ಬಳ್ಳಾರಿ: 32-24
ಗದಗ: 29-22
ಕೊಪ್ಪಳ: 31-23
ರಾಯಚೂರು: 32-24
ಯಾದಗಿರಿ: 31-24
ವಿಜಯಪುರ: 29-23
ಬೀದರ್: 28-22
ಕಲಬುರಗಿ: 31-23
ಬಾಗಲಕೋಟೆ: 30-23