ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಆಗಸ್ಟ್ 2ರ ತನಕ ಸಾಧಾರಣ ಮಳೆ ಮುಂದುವರಿಯುವ ಮುನ್ಸೂಚನೆ ಇದ್ದು, ಗಾಳಿಯ ರಭಸವೂ ಸ್ವಲ್ಪಮಟ್ಟಿಗೆ ಕಡಿಮೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಲೆನಾಡು ಜಿಲ್ಲೆಗಳಾದ ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕೆಲ ಪ್ರದೇಶಗಳಲ್ಲಿ ಬಿಟ್ಟು-ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯಾಗುವ ಸಂಭವವಿದ್ದು, ಉಳಿದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ನೀಡಲಾಗಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ನಗರಗಳ ಹವಾಮಾನ ವರದಿ
ಬೆಂಗಳೂರು: 27-20
ಮಂಗಳೂರು: 26-24
ಶಿವಮೊಗ್ಗ: 26-21
ಬೆಳಗಾವಿ: 24-21
ಮೈಸೂರು: 27-21
ಮಂಡ್ಯ: 28-22
ಮಡಿಕೇರಿ: 22-18
ರಾಮನಗರ: 29-21
ಹಾಸನ: 23-19
ಚಾಮರಾಜನಗರ: 28-21
ಚಿಕ್ಕಬಳ್ಳಾಪುರ: 28-20
ಕೋಲಾರ: 29-21
ತುಮಕೂರು: 28-21
ಉಡುಪಿ: 27-24
ಕಾರವಾರ: 27-26
ಚಿಕ್ಕಮಗಳೂರು: 22-18
ದಾವಣಗೆರೆ: 27-22
ಹುಬ್ಬಳ್ಳಿ: 26-22
ಚಿತ್ರದುರ್ಗ: 27-21
ಹಾವೇರಿ: 27-22
ಬಳ್ಳಾರಿ: 31-24
ಗದಗ: 27-22
ಕೊಪ್ಪಳ: 29-23
ರಾಯಚೂರು: 31-25
ಯಾದಗಿರಿ: 30-24
ವಿಜಯಪುರ: 29-23
ಬೀದರ್: 28-23
ಕಲಬುರಗಿ: 29-24
ಬಾಗಲಕೋಟೆ: 29-23