ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಬೆಳಗಿನ ಜಾವ ಚುಮುಗುಡುವ ಚಳಿ ಇರಲಿದ್ದು, ಮಧ್ಯಾಹ್ನದ ವೇಳೆ ಬಿಸಿಲಿನ ತಾಪಮಾನದಲ್ಲಿ ಏರಿಕೆಯಾಗಲಿದೆ. ಸಂಜೆ ವೇಳೆಗೆ ಮೋಡ ಕವಿದ ವಾತಾವರಣ ಜೊತೆಗೆ ತಂಪಾದ ವಾತಾವರಣದಿಂದ ಕೂಡಿರಲಿದೆ.
ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಕೆಲ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಮಡಿಕೇರಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಇಂದು ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ಇರಲಿದೆ. ಕಾರವಾರ ಜಿಲ್ಲೆಯಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಇರಲಿದೆ. ಇನ್ನೂ ಮಡಿಕೇರಿ ಜಿಲ್ಲೆಗಳಲ್ಲಿ ಗರಿಷ್ಠ 25 ಹಾಗೂ ಕನಿಷ್ಠ 16 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 27-18
ಮಂಗಳೂರು: 32-24
ಶಿವಮೊಗ್ಗ: 30-18
ಬೆಳಗಾವಿ: 30-17
ಮೈಸೂರು: 28-19
ಮಂಡ್ಯ: 29-19
ಮಡಿಕೇರಿ: 25-16
ರಾಮನಗರ: 29-19
ಹಾಸನ: 27-18
ಚಾಮರಾಜನಗರ: 28-19
ಚಿಕ್ಕಬಳ್ಳಾಪುರ: 27-17
ಕೋಲಾರ: 28-18
ತುಮಕೂರು: 28-18
ಉಡುಪಿ: 32-24
ಕಾರವಾರ: 34-23
ಚಿಕ್ಕಮಗಳೂರು: 27-17
ದಾವಣಗೆರೆ: 31-18
ಚಿತ್ರದುರ್ಗ: 29-18
ಹಾವೇರಿ: 31-18
ಬಳ್ಳಾರಿ: 32-19
ಗದಗ: 31-17
ಕೊಪ್ಪಳ: 31-19
ರಾಯಚೂರು: 32-18
ಯಾದಗಿರಿ: 32-18
ವಿಜಯಪುರ: 31-17
ಬೀದರ್: 28-16
ಕಲಬುರಗಿ: 31-16
ಬಾಗಲಕೋಟೆ: 32-18