ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಇಂದು ಕೂಡಾ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅಕ್ಟೋಬರ್ 20 ರ ವರೆಗೆ ರಾಜ್ಯಾದ್ಯಂತ ಮಳೆ ಮುಂದುವರಿಯಲಿದೆ. ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ, ಉತ್ತರ ಒಳನಾಡು ಹಾಗೂ ಕರಾವಳಿಯ ಹಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಒಂದೆರಡು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಇಂದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದ್ದು, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ರಾಯಚೂರು ಹಾಗೂ ಯಾದಗಿರಿಯಲ್ಲಿ ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 27-19
ಮಂಗಳೂರು: 29-24
ಶಿವಮೊಗ್ಗ: 30-21
ಬೆಳಗಾವಿ: 28-21
ಮೈಸೂರು: 27-19
ಮಂಡ್ಯ: 28-20
ಮಡಿಕೇರಿ: 23-16
ರಾಮನಗರ: 28-20
ಹಾಸನ: 27-19
ಚಾಮರಾಜನಗರ: 27-20
ಚಿಕ್ಕಬಳ್ಳಾಪುರ: 27-19
ಕೋಲಾರ: 28-20
ತುಮಕೂರು: 28-19
ಉಡುಪಿ: 29-24
ಕಾರವಾರ: 30-25
ಚಿಕ್ಕಮಗಳೂರು: 26-18
ದಾವಣಗೆರೆ: 29-21
ಚಿತ್ರದುರ್ಗ: 28-21
ಹಾವೇರಿ: 29-21
ಬಳ್ಳಾರಿ: 30-22
ಗದಗ: 29-21
ಕೊಪ್ಪಳ: 29-22
ರಾಯಚೂರು: 31-23
ಯಾದಗಿರಿ: 31-23
ವಿಜಯಪುರ: 29-22
ಬೀದರ್: 28-21
ಕಲಬುರಗಿ: 30-22
ಬಾಗಲಕೋಟೆ: 30-22