ರಾಜ್ಯದಲ್ಲಿ ಇಂದು ಭಾರೀ ಮಳೆಯಾಗಲಿದೆ. ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಬೀದರ್, ಕಲಬುರಗಿ, ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ವಿಜಯಪುರ, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಹಾಸನ, ಶಿವಮೊಗ್ಗ, ಜಿಲ್ಲೆಗಳ ಒಂದೆರಡು ಕಡೆಗಳಲ್ಲೂ ಉತ್ತಮ ಮಳೆ ಸುರಿಯಲಿದೆ. ಕರಾವಳಿ ತೀರದಲ್ಲಿ ಬಿರುಗಾಳಿಯ ವೇಗವು ಪ್ರತಿ ಘಂಟೆಗೆ 45-55 ಕಿ.ಮೀ. ಇರಲಿದ್ದು, 65 ಕಿ.ಮೀ. ವರೆಗೂ ತಲುಪುವ ಸಾಧ್ಯತೆ ಇದೆ. ಮೀನುಗಾರರು ಈ ಅವಧಿಯಲ್ಲಿ ಸಮುದ್ರಕ್ಕೆ ತೆರಳದಂತೆ ಸೂಚಿಸಲಾಗಿದೆ.
ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿದ್ದು, ಕೆಲ ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಗುಡುಗು ಸಹಿತ ಮಳೆ ಬರುವ ಸೂಚನೆ ಇದೆ. ರಾಜ್ಯಾದ್ಯಂತ ಎಲ್ಲ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆ ಬರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 26-19
ಮಂಗಳೂರು: 27-25
ಶಿವಮೊಗ್ಗ: 24-21
ಬೆಳಗಾವಿ: 22-20
ಮೈಸೂರು: 25-20
ಮಂಡ್ಯ: 27-21
ಕೊಡಗು: 20-17
ರಾಮನಗರ: 27-21
ಹಾಸನ: 22-18
ಚಾಮರಾಜನಗರ: 26-21
ಚಿಕ್ಕಬಳ್ಳಾಪುರ: 26-20
ಕೋಲಾರ: 27-21
ತುಮಕೂರು: 26-20
ಉಡುಪಿ: 27-25
ಚಿಕ್ಕಮಗಳೂರು: 21-18
ದಾವಣಗೆರೆ: 26-21
ಚಿತ್ರದುರ್ಗ: 26-21
ಹಾವೇರಿ: 25-21
ಬಳ್ಳಾರಿ: 28-23
ಗದಗ: 25-21
ಕೊಪ್ಪಳ: 27-22
ರಾಯಚೂರು: 26-23
ಯಾದಗಿರಿ: 25-22
ವಿಜಯಪುರ: 24-21
ಬೀದರ್: 23-21
ಕಲಬುರಗಿ: 26-22
ಬಾಗಲಕೋಟೆ: 26-22