ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಮುಖಗೊಂಡಿರುವ ಹಿನ್ನೆಲೆ ರಾಜ್ಯ ಸರ್ಕಾರ ನೈಟ್ ಕರ್ಫ್ಯೂವನ್ನು ಹಿಂಪಡೆದಿದೆ.
ಕೊರೊನಾ ಎರಡನೇ ಅಲೆಯ ವೇಳೆ ಜನರನ್ನು ಕೋವಿಡ್ ಸೋಂಕಿನಿಂದ ರಕ್ಷಿಸಲು ರಾಜ್ಯ ಸರ್ಕಾರ ಹಲವಾರು ನಿಯಮಗಳನ್ನು ಜಾರಿಗೊಳಿಸಿತ್ತು. ಇವುಗಳ ನಡುವೆ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೂ ರಾಜ್ಯದಲ್ಲಿ ನೈರ್ಟ್ ಕರ್ಫ್ಯೂವನ್ನು ವಿಧಿಸಿತ್ತು. ಇದನ್ನೂ ಓದಿ: ಪುನೀತ್ಗೆ ಪದ್ಮಶ್ರೀ ಪ್ರಶಸ್ತಿ ನೀಡಬೇಕು: ಮುನಿರತ್ನ
ಇದೀಗ ಕೊರೊನಾ ಪ್ರಕರಣಗಳು ಇಳಿಕೆಯಾಗಿರುವ ಹಿನ್ನೆಲೆ ರಾಜ್ಯದಲ್ಲಿ ವಿಧಿಸಿದ್ದ ನೈಟ್ ಕರ್ಫ್ಯೂವನ್ನು ಸರ್ಕಾರ ಹಿಂಪಡೆದುಕೊಂಡಿದೆ. ಇದರ ಜೊತೆಗೆ ಕುದುರೆ ರೇಸ್ ನಡೆಸಲು ಸಹ ಸರ್ಕಾರ ಅನುಮತಿ ನೀಡಿದೆ. ಕುದುರೆ ರೇಸ್ನಲ್ಲಿ ಭಾಗವಹಿಸುವವರು 2 ಡೋಸ್ ಕೊರೊನಾ ಲಸಿಕೆ ಪಡೆದಿರಬೇಕೆಂದು ಸೂಚಿಸಿದೆ. ಇದನ್ನೂ ಓದಿ: ಅಪ್ಪು ಸದಾ ನಮ್ಮ ಹೃದಯದಲ್ಲಿ ನಗುತ್ತಿರುತ್ತಾರೆ – ಪುನೀತ್ ನೆನೆದು ಬಿಕ್ಕಿ, ಬಿಕ್ಕಿ ಅತ್ತ ಸೂರ್ಯ
ಸ್ಥಳಾವಕಾಶದ ಸಾಮರ್ಥ್ಯದಷ್ಟು ಕುದುರೆಗಳಿಗೆ ಮಾತ್ರ ರೇಸ್ಗೆ ಅನುಮತಿ ನೀಡಲಾಗಿದ್ದು, ಮಾಸ್ಕ್ ಧರಿಸುವುದು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಹಲವು ಕೋವಿಡ್ ನಿಯಮಗಳ ಪಾಲನೆಯನ್ನು ಕಡ್ಡಾಯಗೊಳಿಸಲಾಗಿದೆ. ಇದನ್ನೂ ಓದಿ: ಬಿಡದಿ ತೋಟದಲ್ಲಿ ಗೋಪೂಜೆ ನೆರವೇರಿಸಿದ ಹೆಚ್ಡಿಕೆ ದಂಪತಿ