ನವದೆಹಲಿ: ನಿಯಮ ಉಲ್ಲಂಘಿಸಿ ಚೀನಿ ಪ್ರಜೆಗಳಿಗೆ ವೀಸಾ ನೀಡಿರುವ ಪ್ರಕರಣದ ಹಿನ್ನೆಲೆಯಲ್ಲಿ ಇಂದು ವಿಚಾರಣೆಗೆ ಹಾಜರಾಗಲು ಕಾರ್ತಿ ಚಿದಂಬರಂಗೆ ಸಿಬಿಐ ಸಮನ್ಸ್ ನೀಡಿದೆ.
2011ರಲ್ಲಿ ಪಿ. ಚಿದಂಬರಂ ಅವರು ಗೃಹ ಸಚಿವರಾಗಿದ್ದಾಗ 263 ಚೀನಿ ಪ್ರಜೆಗಳಿಗೆ ವೀಸಾ ನೀಡಿದ್ದ ಹಗರಣದ ತನಿಖೆಗೆ ಸಂಬಂಧಿಸಿ ಚಿದಂಬರ್ ಪುತ್ರ ಹಾಗೂ ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ಅವರನ್ನು ನವದೆಹಲಿಯ ಸಿಬಿಐ ಪ್ರಧಾನ ಕಚೇರಿಯಲ್ಲಿ ವಿಚಾರಣೆಗೆ ಒಳಪಡಿಸಲಾಗುವುದು. ಇದನ್ನೂ ಓದಿ: ಅಮೆರಿಕಾದ ಶಾಲೆಯಲ್ಲಿ ಶೂಟೌಟ್-18 ವಿದ್ಯಾರ್ಥಿಗಳು ಸೇರಿ 21 ಮಂದಿ ದುರ್ಮರಣ
ಸುಪ್ರೀಂ ಕೋರ್ಟ್ ಮತ್ತು ವಿಶೇಷ ಸಿಬಿಐ ನ್ಯಾಯಾಲಯದ ಅನುಮತಿಯೊಂದಿಗೆ ಯುಕೆ ಮತ್ತು ಯುರೋಪ್ ಪ್ರವಾಸಕ್ಕೆ ತೆರಳಿರುವ ಕಾರ್ತಿ ಚಿದಂಬರಂ ಮಂಗಳವಾರ ವಾಪಸಾಗಿದ್ದಾರೆ. ಈ ಹಿನ್ನೆಲೆಯಲ್ಲಿ ವಿಶೇಷ ಸಿಬಿಐ ನ್ಯಾಯಾಲಯದ ಆದೇಶದ ಪ್ರಕಾರ, ಅವರು ಹಿಂದಿರುಗಿದ 16 ಗಂಟೆಗಳ ಒಳಗೆ ಸಿಬಿಐ ವಿಚಾರಣೆಗೆ ಒಳಪಡಬೇಕು ಎಂದು ಆದೇಶಿಸಲಾಗಿದೆ. ಇದನ್ನೂ ಓದಿ: ಹುಳ ಬಿದ್ದ ಅಕ್ಕಿ ಬಳಸಿ ಮಕ್ಕಳಿಗೆ ಬಿಸಿಯೂಟ – ಸ್ಥಳೀಯರ ಆಕ್ರೋಶ