ಯಾವ ಪುರುಷಾರ್ಥಕ್ಕೆ ಹೊಸ ಜಿಲ್ಲೆ – ಬಿಎಸ್‍ವೈ ವಿರುದ್ಧ ಬಿಜೆಪಿ ಶಾಸಕನ ಅಸಮಾಧಾನ

Public TV
1 Min Read
Karunakar Reddy web

ಬಳ್ಳಾರಿ: ಬಳ್ಳಾರಿಯನ್ನು ವಿಭಾಗಿಸಿ ವಿಜಯನಗರ ಹೊಸ ಜಿಲ್ಲೆ ಮಾಡಬೇಕೆಂಬ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ನಿರ್ಧಾರದ ಕುರಿತು ಮತ್ತೊಬ್ಬ ಬಿಜೆಪಿ ಶಾಸಕ ವಿರೋಧ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಬಿಜೆಪಿ ಶಾಸಕ ಕರುಣಾಕರ್ ರೆಡ್ಡಿ ಬಳ್ಳಾರಿಯಲ್ಲಿ ರಾಜ್ಯ ಸರ್ಕಾರ ಹಾಗೂ ಸಿಎಂ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದು, ಇದೇ ತಿಂಗಳು 19 ರಂದು ಸಿಎಂ ಯಡಿಯೂರಪ್ಪ ವಿಜಯನಗರ ಜಿಲ್ಲೆ ಮಾಡಬೇಕೆಂದು ಪತ್ರ ಬರೆದಿದ್ದಾರೆ. ಹೊಸ ಜಿಲ್ಲೆ ರಚನೆಗೆ ಮುಂದಾಗಿದ್ದಾರೆ. ಯಾವ ಪುರುಷಾರ್ಥಕ್ಕಾಗಿ ಹೊಸ ಜಿಲ್ಲೆ ಮಾಡಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

BSY 3

ಜಿಲ್ಲೆಯಲ್ಲಿ ನಾವು ನಾಲ್ಕು ಜನ ಬಿಜೆಪಿ ಶಾಸಕರಿದ್ದೇವೆ. ನಮ್ಮ ಅಭಿಪ್ರಾಯ ಪಡೆಯಬೇಕಿತ್ತು. ಸಿಎಂ ಯಡಿಯೂರಪ್ಪ ಮೇಲೆ ನಮಗೆ ಅಪಾರ ಗೌರವವಿದೆ. ಆದರೆ ಇದು ಆತುರದ ನಿರ್ಧಾರವಾಗಿದೆ. ಕೆಲವರ ಹಿತಾಸಕ್ತಿಗೆ ಬಿಎಸ್‍ವೈ ಮಣಿದಿದ್ದಾರೆ. ಇದು ಸರಿಯಲ್ಲ ಎಂದು ಪರೋಕ್ಷವಾಗಿ ಆನಂದ್ ಸಿಂಗ್ ಅವರಿಗೆ ರೆಡ್ಡಿ ಟಾಂಗ್ ನೀಡಿದ್ದಾರೆ.

ಹಡಗಲಿ, ಹಗರಿಬೊಮ್ಮನಹಳ್ಳಿ, ಕೊಟ್ಟೂರು, ಹರಪನಹಳ್ಳಿ ಜಿಲ್ಲೆ ಆಗಬೇಕೆಂದು ಹೋರಾಟ ನಡೆಯುತ್ತಿದ್ದು, ಇದರಿಂದ ಬಳ್ಳಾರಿ ಜಿಲ್ಲೆಯಲ್ಲಿ ಅಶಾಂತಿ ವಾತವರಣ ನಿರ್ಮಾಣವಾಗಿದೆ. ಹಂಪಿ, ಟಿಬಿ ಡ್ಯಾಂ ನಮ್ಮ ಹೆಮ್ಮೆ, ಯಡಿಯೂಪ್ಪನವರು ಸಿಎಂ ಆಗಬೇಕಾದರೆ ನಾವೂ ಕೂಡ ಬೆಂಬಲ ಕೊಟ್ಟವರು. ನಮ್ಮನ್ನೂ ಪರಿಗಣಿಸಬೇಕಿದೆ ಎಂದು ತಿಳಿಸಿದರು.

anand singh bng a copy

ಈಗ ಬೆಳಗಾವಿ, ಶಿರಸಿ, ಹೋರಾಟಗಳು ನಡೆಯುತ್ತಿವೆ. ದಯವಿಟ್ಟು ಜಿಲ್ಲೆ ಒಡೆಯಬೇಡಿ. ನಾವು ಒಗ್ಗಟ್ಟಾಗಿ ಇರಲು ಬಿಡಿ. ಬಳ್ಳಾರಿ ಒಡೆಯುವುದಾದರೆ ಹರಪನಹಳ್ಳಿ ಜಿಲ್ಲೆ ಮಾಡಿ. ನಮ್ಮ ಮೊದಲ ಆದ್ಯತೆ ಜಿಲ್ಲೆ ಅಖಂಡವಾಗಿಯೇ ಇರಲಿ. ಜಿಲ್ಲೆಯನ್ನು ಮಾಡಲೇಬೇಕು ಅಂದಾಗ ಹರಪನಹಳ್ಳಿ ಮಾಡಿ. ಆನಂದ್ ಸಿಂಗ್ ಮನವಿ ಪತ್ರ ಸಲ್ಲಿಸಿದ ಮರುದಿನವೇ ಪ್ರತಿಕ್ರಿಯೆ ನೀಡುತ್ತಾರೆ. ಅವಸರದ ನಿರ್ಧಾರ ತೆಗೆದುಕೊಳ್ಳುವುದರಿಂದ ಹಿಂದೆ ಸರಿಯಬೇಕು. ವೈಜ್ಞಾನಿಕವಾಗಿ ಇದು ಸರಿಯಲ್ಲ. ಮೊದಲು ಕರೆದು ಮಾತನಾಡಲಿ. ಗೌರವಾನ್ವಿತ ಸಿಎಂ ಆಲೋಚನೆ ಮಾಡಿ ಮುಂದಿನ ಕ್ರಮ ತೆಗೆದುಕೊಳ್ಳಲಿ. ಜಿಲ್ಲೆ ಒಡೆಯುವುದನ್ನು ವಿರೋಧಿಸಿ ಬಳ್ಳಾರಿ ಬಂದ್‍ಗೆ ಕರೆ ನೀಡಿರುವುದಕ್ಕೆ ನನ್ನ ಬೆಂಬಲವಿದೆ ಎಂದು ಸ್ಪಷ್ಟಪಡಿಸಿದರು.

Share This Article