ಚೆನ್ನೈ: ತಮಿಳುನಾಡಿನ ಡಿಎಂಕೆ ಪಕ್ಷದ ಅಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಂ ಕರುಣಾನಿಧಿ ಅವರ ಆರೋಗ್ಯ ಗಂಭೀರವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಜ್ವರ ಹಾಗೂ ಮೂತ್ರನಾಳ ಸೋಂಕಿನಿಂದ ಬಳಲುತ್ತಿದ್ದ ಕರುಣಾನಿಧಿಯವರನ್ನು ಜುಲೈ 28ರಂದು ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಾಗಿಸಲಾಗಿತ್ತು. ಇಂದು ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಕಾವೇರಿ ಆಸ್ಪತ್ರೆ ಆಡಳಿತ ಮಂಡಳಿ ಪುತ್ರಿ ಕನಿಮೋಳಿಯೊಂದಿಗೆ ಮಾಹಿತಿ ಹಂಚಿಕೊಂಡಿದ್ದಾರೆ.
ಕಳೆದ ವಾರದಿಂದ ಚಿಕಿತ್ಸೆಗೆ ಸ್ಪಂದಿಸಿದ್ದ ಅವರು ಸ್ವಲ್ಪ ಚೇತರಿಕೆ ಕಂಡಿದ್ದರು. ಆದರೆ ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿರುವುದರಿಂದ ಅವರ ಆರೋಗ್ಯ ಮತ್ತಷ್ಟು ಗಂಭೀರವಾಗಿದೆ. ಕರುಣಾನಿಧಿಯವರಿಗೆ ಉನ್ನತ ವೈದ್ಯರುಗಳು ಚಿಕಿತ್ಸೆ ಮುಂದುವರಿಸಿದ್ದು, ಆರೋಗ್ಯ ಸುಧಾರಣೆ ಕಾಣುವವರೆಗೂ ಆಸ್ಪತ್ರೆಯಲ್ಲೇ ದಾಖಲಾಗಿರುತ್ತಾರೆ ಎಂದು ಆಸ್ಪತ್ರೆ ಆಡಳಿತ ಮಂಡಳಿ ಹೇಳಿದೆ.
ಕರುಣಾನಿಧಿಯವರು ಆಸ್ಪತ್ರೆಗೆ ದಾಖಲಿಸಿದ ದಿನದಿಂದಲೂ ಆಸ್ಪತ್ರೆ ಬಳಿಯೇ ಜಮಾಯಿಸುವ ಅಭಿಮಾನಿಗಳಿಗೆ ವೈದ್ಯರ ಹೇಳಿಕೆಯಿಂದಾಗಿ ಮತ್ತಷ್ಟು ಆತಂಕಕ್ಕೊಳಗಾಗಿದ್ದಾರೆ. ಅಲ್ಲದೇ ಅಭಿಮಾನಿಗಳು ಕರುಣಾನಿಧಿಯವರು ಆದಷ್ಟು ಬೇಗ ಗುಣಮುಖರಾಗಿಬರಲೆಂದು ಹಾರೈಸುತ್ತಿದ್ದಾರೆ.
Visited Thiru M. Karunanidhi in Chennai, met Kalaignar‘s family members and doctors, and inquired about his health. Wishing the former Chief Minister of Tamil Nadu, a veteran of our public life, a quick recovery #PresidentKovind pic.twitter.com/LIxLzTnzWc
— President of India (@rashtrapatibhvn) August 5, 2018
ಭಾನುವಾರ ರಾಷ್ಟ್ರಪತಿ ರಾಮನಾಥ ಕೋವಿಂದರವರು ಕಾವೇರಿ ಆಸ್ಪತ್ರೆಗೆ 5 ಬಾರಿ ಭೇಟಿ ನೀಡಿ ಕರುಣಾನಿಧಿಯವರ ಆರೋಗ್ಯವನ್ನು ಖುದ್ದು ವಿಚಾರಿಸಿದ್ದಾರೆ. ಅವರ ಆರೋಗ್ಯದ ಬಗ್ಗೆ ಪುತ್ರ ಸ್ಟಾಲಿನ್ ಹಾಗೂ ವೈದ್ಯರ ಬಳಿ ದೀರ್ಘ ಮಾತುಕತೆಯನ್ನು ನಡೆಸಿದ್ದರು. ಭೇಟಿಯ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿತಿಸಿದ ಅವರು, ಕರುಣಾನಿಧಿಯವರು ಶೀಘ್ರವೇ ಗುಣಮುಖರಾಗಿ ಸಹಜ ಸ್ಥಿತಿಗೆ ಮರಳುತ್ತಾರೆಂದು ತಿಳಿಸಿದ್ದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews